ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾಗ್ಯಲಕ್ಷ್ಮಿ ಯೋಜನೆ ನಿಲ್ಲದು - ಸಿಎ೦

By Staff
|
Google Oneindia Kannada News

Yeddyurappa
ಬೆ೦ಗಳೂರು, ಮೇ. 8 : ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ರೂಪಿಸಿರುವ ಭಾಗ್ಯಲಕ್ಷ್ಮಿ ಯೋಜನೆ ಮು೦ದುವರಿಯಲಿದೆ ಎ೦ದು ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಯಡಿಯೂರಪ್ಪ, ಭಾಗ್ಯಲಕ್ಷ್ಮಿ ಯೋಜನೆ ಯಶಸ್ವಿಯಾಗಿದ್ದು 7.89 ಲಕ್ಷ ಹೆಣ್ಣುಮಕ್ಕಳಿಗೆ ಇದರಡಿಯಲ್ಲಿ ಸೌಲಭ್ಯ ಒದಗಿಸಲಾಗಿದೆ ಎ೦ದು ಹೇಳಿಕೆ ನೀಡಿದ್ದಾರೆ.

ಶೇ. 75 ರಷ್ಟು ಅಂಗವಿಕಲತೆ ಹೊಂದಿರುವ ವಿಕಲಾಂಗರಿಗೆ ಮಾಸಿಕ 1000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. 5.70 ಲಕ್ಷ ವಿಕಲಚೇತನರಿಗೆ ವೇತನ ನೀಡಲಾಗುತ್ತಿದೆ. ಇನ್ನೂ ಸಾಕಷ್ಟು ಜನ ವಿಕಲಚೇತನರು ಈ ಸೌಲಭ್ಯದಿಂದ ವಂಚಿತರಾಗಿರುವ ಬಗ್ಗೆ ಮಾಹಿತಿ ಇರುವುದರಿ೦ದ ಈ ಯೋಜನೆಯ ಫಲ ಅವರಿಗೂ ಸಿಗುವ೦ತೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಸೂಕ್ತವಾಗಿ ಒದಗಿಸುವ ಸಂಬಂಧವೂ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವ೦ತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹೇಳಿದರು. ಸಚಿವರುಗಳಾದ ನರೇ೦ದ್ರಸ್ವಾಮಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

ಐಟಿ ಮಂದಿಗೆ ಧೈರ್ಯ ತುಂಬಿದ ಸಿಎಂ
ಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X