ಸತ್ಯಂ ಬಿಪಿಒನಲ್ಲಿ ಪಿಂಕ್ ಸ್ಲಿಪ್ ಮೇಳ ಆರಂಭ
ಹೈದರಾಬಾದ್, ಮೇ. 8 : ಜಾಗತಿಕ ಆರ್ಥಿಕ ಮಾರುಕಟ್ಟೆ ಆರ್ಥಿಕ ಹಿಂಜರಿತಕ್ಕೆ ಸಂಬಂಧಿಸಿ ಟೆಕ್ ಮಹಿಂದ್ರ ಕಂಪನಿ ಇತ್ತೀಚೆಗೆ ತನ್ನ ವಶಕ್ಕೆ ತೆಗೆದುಕೊಂಡಿರುವ ಸತ್ಯಂ ಕಂಪನಿಯ ಬಿಪಿಒ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ರಾಮಲಿಂಗರಾಜು ಅವರ ಮೋಸದ ಲೆಕ್ಕಾಚಾರದಿಂದ ಸತ್ಯಂ ಕಂಪನಿ ಉದ್ಯೋಗಿಗಳು ಕೆಲಸ ಉಳಿಸಿಕೊಳ್ಳಲು ಹರಸಾಹಸ ನಡೆಸಿರುವ ಬೆನ್ನಲ್ಲೇ ನೂತನ ಆಡಳಿತ ಮಂಡಳಿಯ ತೆಗೆದುಕೊಂಡಿರುವ ನಿರ್ಧಾರ ಉದ್ಯೋಗಿಗಳಿಗೆ ಶಾಕ್ ನೀಡಿರುವುದಂತೂ ಸುಳ್ಳಲ್ಲ.
ಸತ್ಯಂ ಬಿಪಿಒದಲ್ಲಿ 3000 ಅಸೋಸಿಯೇಟ್ಸ್ ಕೆಲಸ ನಿರ್ವಹಿಸುತ್ತಾರೆ. 35 ಜನರಿಗೆ ಒಬ್ಬರು ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಪ್ರಮಾಣ ಹೆಚ್ಚಾಗಿದ್ದು, 80 ಮಂದಿ ಅಸೋಸಿಯೇಟ್ಸ್ ಗೆ ಒಬ್ಬರು ಸಹಾಯಕರಂತೆ ಇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಅಲ್ಲದೇ ಮಾನವ ಸಂಪನ್ಮೂಲ ವಿಭಾಗದಲ್ಲಿ ಕೂಡಾ 60 ಜನರು ಮನೆಗೆ ಕಳಹಿಸಲು ಚಿಂತನೆ ನಡೆದಿದೆ.
ಕಾಸ್ಟ್ ಕಟಿಂಗ್ ಹಿನ್ನೆಲೆಯಲ್ಲಿ 200 ಮಿಲಿಯನ್ ಹಣವನ್ನು ಉಳಿಸಲು ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಸತ್ಯಂ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸಂಖ್ಯೆಯ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುವುದು. ಹಳೆಯ ಸತ್ಯಂ ಕಂಪನಿಯ ಆಡಳಿತ ಮಂಡಳಿ ಹೆಚ್ಚೆಚ್ಚು ಉದ್ಯೋಗಿಗಳನ್ನು ಸೇರಿಸಿಕೊಂಡಿದೆ. ಇದರಿಂದ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ನಷ್ಟ ಭರಿಸುವ ಶಕ್ತಿ ನಮ್ಮಲ್ಲಿದ ಕಾರಣ, ಅನಿವಾರ್ಯವಾಗಿ ಉದ್ಯೋಗಿಗಳನ್ನು ಮನೆಗೆ ಕಳಿಸಬೇಕಾಗಿದೆ ಎಂದು ಕಂಪನಿ ಮೂಲಗಳು ತಿಳಿಸಿವೆ. ಒಂದು ಮೂಲದ ಪ್ರಕಾರ ಸತ್ಯಂ ಕಂಪನಿಯ 10 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತಿದೆ ಎನ್ನುವ ಸುದ್ದಿ ಇದೆ.
(ಏಜನ್ಸೀಸ್)
ಮೈಕ್ರೋಸಾಫ್ಟ್ 3000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications