ಸತ್ಯಂ ಬಿಪಿಒನಲ್ಲಿ ಪಿಂಕ್ ಸ್ಲಿಪ್ ಮೇಳ ಆರಂಭ
ಹೈದರಾಬಾದ್, ಮೇ. 8 : ಜಾಗತಿಕ ಆರ್ಥಿಕ ಮಾರುಕಟ್ಟೆ ಆರ್ಥಿಕ ಹಿಂಜರಿತಕ್ಕೆ ಸಂಬಂಧಿಸಿ ಟೆಕ್ ಮಹಿಂದ್ರ ಕಂಪನಿ ಇತ್ತೀಚೆಗೆ ತನ್ನ ವಶಕ್ಕೆ ತೆಗೆದುಕೊಂಡಿರುವ ಸತ್ಯಂ ಕಂಪನಿಯ ಬಿಪಿಒ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ರಾಮಲಿಂಗರಾಜು ಅವರ ಮೋಸದ ಲೆಕ್ಕಾಚಾರದಿಂದ ಸತ್ಯಂ ಕಂಪನಿ ಉದ್ಯೋಗಿಗಳು ಕೆಲಸ ಉಳಿಸಿಕೊಳ್ಳಲು ಹರಸಾಹಸ ನಡೆಸಿರುವ ಬೆನ್ನಲ್ಲೇ ನೂತನ ಆಡಳಿತ ಮಂಡಳಿಯ ತೆಗೆದುಕೊಂಡಿರುವ ನಿರ್ಧಾರ ಉದ್ಯೋಗಿಗಳಿಗೆ ಶಾಕ್ ನೀಡಿರುವುದಂತೂ ಸುಳ್ಳಲ್ಲ.
ಸತ್ಯಂ ಬಿಪಿಒದಲ್ಲಿ 3000 ಅಸೋಸಿಯೇಟ್ಸ್ ಕೆಲಸ ನಿರ್ವಹಿಸುತ್ತಾರೆ. 35 ಜನರಿಗೆ ಒಬ್ಬರು ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಪ್ರಮಾಣ ಹೆಚ್ಚಾಗಿದ್ದು, 80 ಮಂದಿ ಅಸೋಸಿಯೇಟ್ಸ್ ಗೆ ಒಬ್ಬರು ಸಹಾಯಕರಂತೆ ಇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಅಲ್ಲದೇ ಮಾನವ ಸಂಪನ್ಮೂಲ ವಿಭಾಗದಲ್ಲಿ ಕೂಡಾ 60 ಜನರು ಮನೆಗೆ ಕಳಹಿಸಲು ಚಿಂತನೆ ನಡೆದಿದೆ.
ಕಾಸ್ಟ್ ಕಟಿಂಗ್ ಹಿನ್ನೆಲೆಯಲ್ಲಿ 200 ಮಿಲಿಯನ್ ಹಣವನ್ನು ಉಳಿಸಲು ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಸತ್ಯಂ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸಂಖ್ಯೆಯ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುವುದು. ಹಳೆಯ ಸತ್ಯಂ ಕಂಪನಿಯ ಆಡಳಿತ ಮಂಡಳಿ ಹೆಚ್ಚೆಚ್ಚು ಉದ್ಯೋಗಿಗಳನ್ನು ಸೇರಿಸಿಕೊಂಡಿದೆ. ಇದರಿಂದ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ನಷ್ಟ ಭರಿಸುವ ಶಕ್ತಿ ನಮ್ಮಲ್ಲಿದ ಕಾರಣ, ಅನಿವಾರ್ಯವಾಗಿ ಉದ್ಯೋಗಿಗಳನ್ನು ಮನೆಗೆ ಕಳಿಸಬೇಕಾಗಿದೆ ಎಂದು ಕಂಪನಿ ಮೂಲಗಳು ತಿಳಿಸಿವೆ. ಒಂದು ಮೂಲದ ಪ್ರಕಾರ ಸತ್ಯಂ ಕಂಪನಿಯ 10 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತಿದೆ ಎನ್ನುವ ಸುದ್ದಿ ಇದೆ.
(ಏಜನ್ಸೀಸ್)
ಮೈಕ್ರೋಸಾಫ್ಟ್ 3000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications