ಪಿಯುಸಿ ಫಲಿತಾಂಶ : ವಿದ್ಯಾರ್ಥಿನಿಯರ ಮೇಲುಗೈ
ಬೆಂಗಳೂರು, ಮೇ 09 : 2008-09ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಎಸ್.ಜಿ. ಹೆಗ್ಡೆ ಅವರು ಇಂದು ಮಧ್ಯಾಹ್ನ ಪ್ರಕಟಿಸಿದರು.
ರಾಜ್ಯದಲ್ಲಿ ಒಟ್ಟಾರೆ ಶೇ.43.34ರಷ್ಟು ಫಲಿತಾಂಶ ಕಂಡುಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಪಡೆದಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದರೆ, ರಾಯಚೂರು ಜಿಲ್ಲೆ ತೇರ್ಗಡೆಯ ಪಟ್ಟಿಯಲ್ಲಿ ಕೊನೆಯಲ್ಲಿದೆ. 28 ಸರ್ಕಾರಿ ಕಾಲೇಜುಗಳು ಸೇರಿದಂತೆ 73 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಫಲಿತಾಂಶದಲ್ಲಿ ಈ ವರ್ಷ ಏರಿಕೆ ಕಂಡುಬಂದಿದೆ ಎಂದು ಅವರು ತಿಳಿಸಿದರು.
ಮುಖ್ಯಾಂಶಗಳು ಕೆಳಗಿನಂತಿವೆ
* ಪ್ರತಿವರ್ಷದಂತೆ ತೇರ್ಗಡೆಯಲ್ಲಿ ವಿದ್ಯಾರ್ಥಿನಿಯರು ಮುಂದು, ವಿದ್ಯಾರ್ಥಿಗಳು ಹಿಂದೆ.
* ದಕ್ಷಿಣ ಕನ್ನಡ ಜಿಲ್ಲೆ ಪ್ರತಿಸಲದಂತೆ ಮೊದಲ ಸ್ಥಾನ ಕಾಯ್ದುಕೊಂಡಿದೆ.
* ಉಡುಪಿ ಜಿಲ್ಲೆ ಎರಡನೇ ಸ್ಥಾನ ಕಾಯ್ದುಕೊಂಡಿದೆ.
* ರಾಯಚೂರು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
* 28 ಸರ್ಕಾರಿ ಕಾಲೇಜು ಮತ್ತು 45 ಇತರ ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ.
* ಗ್ರಾಮಾಂತರ ವಿದ್ಯಾರ್ಥಿಗಿಂತ ನಗರದ ವಿದ್ಯಾರ್ಥಿಗಳು ಹೆಚ್ಚು ಪಾಸ್.
* ಮೇ 10ರಂದು ಬೆಳಿಗ್ಗೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟ.
* 50 ಬೆಂಗಳೂರು ಒನ್ ಮತ್ತು 800 ನೆಮ್ಮದಿ ಕೇಂದ್ರಗಳಲ್ಲಿ ಫಲಿತಾಂಶವನ್ನು ಪಡೆಯಬಹುದು.
* ಬೆಂಗಳೂರು ಒನ್ ಕೇಂದ್ರಗಳಲ್ಲಿ ಫೋಟೋಕಾಪಿಗಾಗಿ ಮತ್ತು ಮರುಮೌಲ್ಯ ಮಾಪನಕ್ಕಾಗಿ ಅರ್ಜಿ ಸಲ್ಲಿಸಬಹುದು.
(ದಟ್ಸ್ ಕನ್ನಡ ವಾರ್ತೆ)
ದಟ್ಸ್ ಕನ್ನಡದಲ್ಲಿ ಪಿಯುಸಿ ಫಲಿತಾಂಶ ಈಗ ಲಭ್ಯ
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications