Get Updates
Get notified of breaking news, exclusive insights, and must-see stories!

ಕನ್ನಡ ಶಾಸ್ತ್ರೀಯ ಭಾಷೆಗೆ ಕೇಂದ್ರ ಅಸ್ತು

ನವದೆಹಲಿ, ಮೇ. 10 : ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಕುರಿತು 2008ರ ನವೆಂಬರ್ ನಲ್ಲಿ ತೆಗೆದುಕೊಳ್ಳಲಾಗಿದ್ದ ನಿರ್ಧಾರಕ್ಕೆ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಆದರೆ ಚೆನ್ನೈ ಹೈಕೋರ್ಟ್ ನಲ್ಲಿ ಈ ಸಂಬಂಧ ಇತ್ಯರ್ಥವಾಗುವವರೆಗೆ ಕೇಂದ್ರದ ಈ ನಿರ್ಧಾರದಿಂದ ಕನ್ನಡಕ್ಕೆ ಯಾವುದೇ ಲಾಭ ಸಿಗುವುದಿಲ್ಲ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ವಿರೋಧಿಸಿ ಗಾಂಧಿ ಎನ್ನುವವವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ಕಳೆದ ವರ್ಷ ರಾಜ್ಯೋತ್ಸವದ ಸಂದರ್ಭದಲ್ಲೇ ಪ್ರಧಾನಿ ಮನಮೋಹನ್ ಸಿಂಗ್ ಅವರು ಕನ್ನಡಕ್ಕೆ ಶಾಸ್ತ್ರೀಯ ಸ್ತಾನಮಾನ ನೀಡಲು ಸಮ್ಮತಿ ಸೂಚಿಸಿದ್ದರು. ಆದರೆ ಇದು ಮದ್ರಾಸ್ ಪ್ರಕರಣವೊಂದರ ಫಲಶ್ರುತಿಯನ್ನು ಆಧರಿಸುತ್ತದೆ ಎಂದು ತಿಳಿಸಲಾಗಿತ್ತು. ಶುಕ್ರವಾರ ನಡೆದ ಕೇಂದ್ರದ ಸಚಿವ ಸಮ್ಮತಿಸಿತು. ಈ ವಿಷಯದಲ್ಲಿ ಕಳೆದ ಸಂಪುಟ ಸಭೆಯ ನಿರ್ಧಾರದಲ್ಲಿ ಬದಲಾವಣೆ ಮಾಡಲಾಗಿಲ್ಲ.

ಕಾಂಗ್ರೆಸ್ ಸ್ವಾಗತ

ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಕೇಂದ್ರ ಸಂಪುಟ ಸಭೆ ಅನುಮೋದನೆ ನೀಡಿರುವುದಕ್ಕೆ ಪ್ರಧಾನಿ ಸಿಂಗ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸ್ಕೃತಿ ಸಚಿವೆ ಅಂಬಿಕಾ ಸೋನಿ ಸೇರಿದಂತೆ ಸಂಬಂಧಪಟ್ಟ ಎಲ್ಲರನ್ನೂ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅಭಿನಂದಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+