ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ

Pratibha Patil
ಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಆಧುನಿಕ ವೈದ್ಯಕೀಯ ಉಪಕರಣಗಳ, ತಂತ್ರಜ್ಞಾನದ ಸಹಾಯದಿಂದ ಆರೋಗ್ಯಾಭಿವೃದ್ಧಿಗೆ ನೆರವಾಗಬೇಕೆಂದ ರಾಷ್ಟ್ರಪತಿಗಳು, ಗ್ರಾಮೀಣ ಮಹಿಳೆ ಸಾಕ್ಷರಸ್ಥಳಾಗಿ ಆರೋಗ್ಯವಾಗಿದ್ದರೆ ಮಾತ್ರ ಸಮಾಜ ಆರ್ಥಿಕವಾಗಿ ಸಧೃಡವಾಗರಲು ಸಾಧ್ಯ. ಆದ್ದರಿಂದ ನಾವು ನಮ್ಮ ದೇಶದ ಗ್ರಾಮೀಣರಿಗೆ ಹೆಚ್ಚಿನ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಮಠಗಳು, ಸ್ವಯಂ ಸೇವಾ ಸಂಸ್ಥೆಗಳು ಮುಂದಾಗಬೇಕೆಂದರು.

ಗ್ರಾಮೀಣ ಪ್ರದೇಶದ ಆರೋಗ್ಯ ಸೌಲಭ್ಯಗಳಲ್ಲಿ ಸುಧಾರಣೆ ಆಗಿರುವುದರಿಂದ ಶಿಶು ಮರಣ ಹಾಗೂ ಹೆರಿಗೆ ಸಮಯದಲ್ಲಿ ಆಗುತ್ತಿದ್ದ ತಾಯಂದಿರ ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದರು.

ಸಮಾರಂಭದಲ್ಲಿ ಹಾಜರಿದ್ದ ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯದಲ್ಲಿ ಆರೋಗ್ಯ ಕವಚ ಯೋಜನೆಯನ್ವಯ ಇಲ್ಲಿಯತನಕ 38 ಸಾವಿರ ಜನರಿಗೆ ಸಹಾಯವಾಗಿದೆ ಎಂದು ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 75ರಷ್ಟು ಅಂಕ ಗಳಿಸಿದರೆ ಪ್ರೋತ್ಸಾಹ ಬಹುಮಾನವಾಗಿ ರೂ.10,000 ಶೇ.60 ಅಂಕ ಗಳಿಸಿದವರಿಗೆ ರೂ.5,000 ನೀಡಲಾಗುವುದೆಂದರು.

ಕರ್ನಾಟಕ ರತ್ನ ಶತಾಯುಷಿ ಡಾ: ಶಿವಕುಮಾರ ಸ್ವಾಮಿಗಳು ಹಾಗೂ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಸಂದರ್ಭದಲ್ಲಿ ಹಾಜರಿದ್ದರು.

(ದಟ್ಸ್ ಕನ್ನಡ ವಾರ್ತೆ)

ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+