ತೃತೀಯರಂಗ ತೂತು ಬಿದ್ದ ಮನೆ, ಪಿಎಂ

ತೃತೀಯರಂಗದ ವಿರುದ್ಧ ವಾಗ್ದಾಳಿ ನಡೆಸಿದ ಸಿಂಗ್, ತೃತೀಯ ರಂಗ ಎನ್ನುವುದು ಒಡೆದ ಮನೆ. ಈ ರಂಗದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದರು. ನಂತರ ಎನ್ ಡಿಎದತ್ತ ವಾಗ್ಬಾಣ ಶುರು ಮಾಡಿದ ಸಿಂಗ್, ಬಿಜೆಪಿ ಪಕ್ಷದ ಕೋಮುವಾದಿ ಕೃತ್ಯಗಳಿಂದ ಬೇಸತ್ತು ಬಿಜೆಡಿ ಹಾಗೂ ತೆಲುಗು ದೇಶಂ ಪಕ್ಷಗಳು ಎನ್ ಡಿಎ ಒಕ್ಕೂಟದಿಂದ ಹೊರನಡೆದಿವೆ. ಫಲಿತಾಂಶದ ನಂತರ ತೃತೀಯ ರಂಗದ ಗತಿಯನ್ನೇ ಎನ್ ಡಿಎ ಅನುಭವಿಸಲಿದೆ ಎಂದರು.
ಕಾಂಗ್ರೆಸ್ ಪಕ್ಷ ಫಲಿತಾಂಶದ ನಂತರ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಇದರಲ್ಲಿ ಯಾರಿಗೂ ಸಂಶಯಬೇಡ. ದೇಶ ಮುನ್ನೆಡಸಲು ಕಾಂಗ್ರೆಸ್ ಪಕ್ಷವೇ ಸೂಕ್ತ. ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದಾರೆ. ಈ ಸಮುದಾಯಕ್ಕಾಗಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಕೆಲಸ ಮಾಡಲಿದೆ ಎಂದು ಸಿಂಗ್ ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷ ಸರಕಾರ ರಚನೆಗೆ ಬೇಕಿರುವ ಸಂಖ್ಯೆಗಳನ್ನು ಪಡೆಯಲಿದೆ. ಎಡಪಕ್ಷಗಳತ್ತ ಮುಖ ಮಾಡುವ ಪ್ರಶ್ನೆಯೇ ಇಲ್ಲ. ಸದ್ಯದ ಯಪಿಎ ಒಕ್ಕೂಟದ ಮೂಲಕವೇ ಕಾಂಗ್ರೆಸ್ ನೇತೃತ್ವದ ಸರಕಾರ ದಿಲ್ಲಿಯ ಅಧಿಕಾರ ಗದ್ದುಗೆ ಏರಲಿದೆ ಎಂದು ಹೇಳಿದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದ ಸಿಂಗ್, ಆದರೆ, ಲೂಧಿಯಾನದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಜಕಾರಣದಲ್ಲಿ ಧರ್ಮ ತರಬಾರದು. ಧರ್ಮ ತರುತ್ತಿರುವ ಬಿಜೆಪಿಯಂಥ ಪಕ್ಷಗಳನ್ನು ಅಧಿಕಾರದಿಂದ ದೂರ ಇಡಬೇಕು. ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಎಂದಿಗೂ ಬಿಡುವುದಿಲ್ಲ ಎಂದು ಸಿಂಗ್ ಹೇಳಿದರು. 1984 ರಲ್ಲಿ ಸಿಂಗ್ ಹತ್ಯಾಕಾಂಡ ಮೃತಪಟ್ಟವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸೌಲಭ್ಯ ನೀಡಿದೆ. ಪರಿಹಾರಧನವನ್ನು ಸಕಾಲದಲ್ಲಿಯೇ ವಿತರಿಸಲಾಗಿದೆ ಎಂದು ಮನಮೋಹನ್ ಸಿಂಗ್ ಹೇಳಿದರು.
(ಏಜೆನ್ಸೀಸ್)
ಅಡ್ವಾಣಿ ಪ್ರಧಾನಿ ಆಗಲ್ಲ, ಕೋಡಿಮಠ ಶ್ರೀಗಳು
2010ಕ್ಕೆ ಮತ್ತೆ ಲೋಕಸಭೆ ಚುನಾವಣೆ
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications