ರಾಜಸ್ಥಾನ : ವೈದ್ಯಕೀಯ ಕಾಲೇಜಿನಲ್ಲಿ ರ್ಯಾಗಿಂಗ್
ಜೈಪುರ್, ಮೇ. 11 : ರ್ಯಾಗಿಂಗ್ ಗೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರಿಂಕೋರ್ಟ್ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿ ಇದರ ವಿರುದ್ಧ ಕಠಣ ಕ್ರಮಕೈಗೊಳ್ಳುವಂತೆ ಆದೇಶ ನೀಡಿರುವ ಬೆನ್ನಲ್ಲೇ ಜೈಪುರದ ಸಮೀಪ ಇರುವ ಉದಯ್ ಪುರ್ ವೈದ್ಯಕೀಯ ಕಾಲೇಜುನಲ್ಲಿ ರ್ಯಾಗಿಂಗ್ ನಡೆದಿರುವ ವರದಿಯಾಗಿದೆ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಥಳಿಸಿದ ಘಟನೆ ನಡೆದಿದ್ದು, ಹಿರಿಯ ವಿದ್ಯಾರ್ಥಿಗಳನ್ನು ಪೊಲೀಸ್ ಬಂಧಿಸಿದ್ದಾರೆ.

ಪ್ರಥಮ ವರ್ಷದ ಎಂಬಿಬಿಎಸ್ ನಲ್ಲಿ ವಿದ್ಯಾಬ್ಯಾಸ ಮಾಡುತ್ತಿರುವ ಹನುಮಂತಗಢದ ಸುನೀಲ್ ಕುಮಾರ್ ಬಾತಿ ಹಾಗೂ ಬಿಲವಾಲ್ ದ ಗೌರವ್ ಲೋಧ ಹೊಡೆತ ತಿಂದವರಾಗಿದ್ದಾರೆ . ಈ ಇಬ್ಬರು ಪ್ರಥಮ ಎಂಬಿಬಿಎಸ್ ನಲ್ಲಿ ಫೇಲ್ ಆಗಿದ್ದರು ಎನ್ನಲಾಗಿದೆ. ಭಾನುವಾರ ಈ ಇಬ್ಬರು ಲೈಬ್ರರಿಯಿಂದ ತಮ್ಮ ಕೊಠಡಿಗೆ ವಾಪಾಸ್ ತೆರಳುತ್ತಿದ್ದಾಗ ಎಂಬಿಬಿಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ವಿನೋದ್ ಸಿಂಗ್ ಹಾಗೂ ಅಮರ್ ಸಿಂಗ್ ಎಂಬಿಬ್ಬರು ಕಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದಲ್ಲಿ ಫೇಲ್ ಆಗಿದ್ದಕ್ಕೆ ಥಳಿಸಿದರು ಎನ್ನಲಾಗಿದೆ.
ಕಿರಿಯ ವಿದ್ಯಾರ್ಥಿಗಳು ಹಾತಿಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕಾಲೇಜು ಆಡಳಿತ ಮಂಡಲಿ ಹಿರಿಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಿದ್ದಾರೆ ಎಂದು ವರದಿಯಾಗಿದೆ.
(ಏಜನ್ಸೀಸ್)
ರ್ಯಾಗಿಂಗ್ ತಡೆಯಲು ಸುಪ್ರಿಂಕೋರ್ಟ್ ಆದೇಶ
ರ್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications