ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ

By Staff
|
Google Oneindia Kannada News

Janardhan Reddy
ಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಈ ವಿವಾದ ಅಂತರಾಜ್ಯ ವಿಷಯವಲ್ಲ. ಆಂಧ್ರಪ್ರದೇಶದೊಳಗೇ ಇರುವ ಗಣಿಗಳಿಗೆ ಸಂಬಂದಿಸಿದ್ದಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸುವಂತೆ ಆಂಧ್ರಪ್ರದೇಶ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶದಂತೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿ ಈ ಹಿಂದೆ ಕಂದಾಯ, ಅರಣ್ಯ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ವತಿಯಿಂದ ನಡೆಸಲಾಗಿದೆ. ಈ ಕುರಿತ ವರದಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಅವು ತಿಳಿಸಿದರು.

ಆರು ವಾರದೊಳಗೆ ಸಮೀಕ್ಷೆ ವರದಿ ಸಲ್ಲಿಸಬೇಕು ಎಂದು ಸುಪ್ರಿಂಕೋರ್ಟ್ ಆದೇಶ ನೀಡಿದೆ. ಆದರೆ ಸಮೀಕ್ಷೆಯನ್ನು ಭಾರತೀಯ ಸರ್ವೆ ಇಲಾಖೆಯಿಂದಲೇ ಮಾಡಿಸಬೇಕು ಅಥವಾ ರಾಜ್ಯ ಸರಕಾರದಿಂದ ಮಾಡಬೇಕು ಎಂಬ ಯಾವುದೇ ನಿರ್ದೇಶನವನ್ನು ಅದು ನೀಡಿಲ್ಲ. ಕಾನೂನಿನ ಪ್ರಕಾರವೇ ತಾವು ಗಣಿಗಾರಿಕೆ ನಡೆಸುತ್ತಿದ್ದು, ಎಲ್ಲೂ ಅಕ್ರಮ ನಡೆದಿಲ್ಲ. ಆದ್ದರಿಂದ ಗಣಿಗಾರಿಕೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X