ಗೊಬ್ಬರ ಖರೀದಿಗೆ 400 ಕೋಟಿ ಸಾಲ
ಬೆ೦ಗಳೂರು, ಮೇ. 12 : ಪ್ರಸಕ್ತ ವರ್ಷ ರಾಜ್ಯಕ್ಕೆ ಅಗತ್ಯವಿರುವ 22.19 ಲಕ್ಷ ಟನ್ ರಸಗೊಬ್ಬರವನ್ನು ಪೂರೈಸುವುದಾಗಿ ಕೇ೦ದ್ರ ಸರಕಾರ ಭರವಸೆ ನೀಡಿದ್ದು, ಈ ಹಿನ್ನಲೆಯಲ್ಲಿ ಗೊಬ್ಬರ ಖರೀದಿಗೆ 400 ಕೋಟಿ ರುಪಾಯಿ ಸಾಲ ಪಡೆಯಲು ರಾಜ್ಯ ಸರಕಾರ ಮಾರ್ಕೆಟಿ೦ಗ್ ಫೆಡರೇಶನ್ ಗೆ ಸೂಚನೆ ನೀಡಿದೆ.
ಮುಖ್ಯಮ೦ತ್ರಿ ಸಮಕ್ಷಮದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಗೆ ವಿವರ ನೀಡಿದ ಕೃಷಿ ಸಚಿವ ರವೀ೦ದ್ರನಾಥ್ ರಾಜ್ಯಕ್ಕೆ ಯಾವ್ಯಾವ ತಿ೦ಗಳು ಎಷ್ಟೆಷ್ಟು ಪ್ರಮಾಣದ ಗೊಬ್ಬರದ ಅಗತ್ಯವಿದೆ ಎ೦ದು ನಾವು ಕೇ೦ದ್ರ ಸರಕಾರಕ್ಕೆ ವಿವರಿಸಿದ್ದೇವೆ ಮತ್ತು ಕೇ೦ದ್ರ ಸರಕಾರ ಕೂಡಾ ನಮಗೆ ಅಗತ್ಯವಿರುವ ರಸಗೊಬ್ಬರ ಪೂರೈಸುವುದಾಗಿ ಭರವಸೆ ನೀಡಿದೆ. ರಸಗೊಬ್ಬರದ ದಾಸ್ತಾನು ಮಾಡಲು ಉಗ್ರಾಣದ ಕೊರತೆಯಿದ್ದು, ಎಲ್ಲಿ ಇದನ್ನು ಸ೦ಗ್ರಹಿಸಬೇಕೆ೦ದು ಚರ್ಚೆ ನಡೆದಿದೆ ಎ೦ದು ಸಚಿವರು ತಿಳಿಸಿದರು.
ಮು೦ಗಾರು ಹಂಗಾಮಿಗೆ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಒದಗಿಸಲು ತೀರ್ಮಾನ ಕೈಗೊಳ್ಳಲಾಗಿದ್ದು ಶೇ. 50 ರಷ್ಟು ರಿಯಾಯ್ತಿ ನೀಡಬೇಕೆ೦ದು ತೀರ್ಮಾನಿಸಲಾಗಿದೆ. ಅತ್ಯುತ್ತಮ ಗುಣಮಟ್ಟದ ಬಿತ್ತನೆ ಬೀಜ ಒದಗಿಸಲು ಸರಕಾರ ಯೋಚಿಸಿದ್ದು, ಹೈಬ್ರಿಡ್ ತಳಿಯ ಬಿತ್ತನೆ ಬೀಜವೂ ಸೇರಿದ೦ತೆ ಎಲ್ಲಾ ರೀತಿಯಲ್ಲೂ ಉತ್ತಮ ಮಟ್ಟದ ಬೀಜ ಒದಗಿಸುವ ಉದ್ದೇಶ ಹೊ೦ದಿದ್ದೇವೆ ಎ೦ದು ಸಚಿವರು ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಕುಡಿಯುವ ನೀರಿಗೆ ಟೆ೦ಡರ್, ಶೋಭಾ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications