ಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ
ರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.
ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಕ್ಷೇತ್ರದಲ್ಲಿ ನನ್ನ ಹೆಸರಿಗೆ ಚ್ಯುತಿ ತರಲು ಈ ಕೆಲಸ ನಡೆದಿದೆ. ಇದು ಅಜಂ ಖಾನ್ ಅವರ ರಾಜಕೀಯ ಪ್ರೇರಿತ ದ್ವೇಷದ ರಾಜಕಾರಣ. ಚುನಾವಣೆಗೆ ಮುಂಚೆ ಈ ಕ್ಷೇತ್ರದಿಂದ ನೀವೇ ಸ್ಪರ್ಧಿಸಿ ಎಂದು ಖಾನ್ ಅವರನ್ನು ಕೇಳಿದ್ದೆ. ನಿಮ್ಮ ಪರವಾಗಿ ಪ್ರಚಾರಕ್ಕೆ ಬರುತ್ತೇನೆ ಎಂದು ಅವರಿಗೆ ಹೇಳಿದ್ದೆ. ಅವರು ಸ್ಪರ್ಧಿಸಲು ಆಸಕ್ತಿ ತೋರದೇ ಇದ್ದಿದ್ದರಿಂದ ನಾನು ಈ ಕ್ಷೇತ್ರದಿಂದ ಸ್ಪರ್ಧಿಸಿದೆ ಎಂದು ಜಯಪ್ರದಾ ಅಜಂ ಖಾನ್ ಮೇಲೆ ಹರಿಹಾಯ್ದಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಮತ್ತು ಮತ್ತೊಬ್ಬ ಪಕ್ಷದ ಪ್ರಭಾವಿ ಮುಸ್ಲಿಂ ನಾಯಕ ಅಜಂ ಖಾನ್ ನಡುವಿನ ಪ್ರತಿಷ್ಠೆ ಕಣವಾಗಿರುವ ಈ ಕ್ಷೇತ್ರದಲ್ಲಿ ಜಯಪ್ರದಾ ಅವರನ್ನು ಸೋಲಿಸಬೇಕೆಂದು ಅಜಂ ಖಾನ್ ಶತಾಯು ಗತಾಯು ಪ್ರಯತ್ನ ನಡೆಸುತ್ತಿದ್ದಾರೆಂದು ಎಸ್ಪಿ ಕಾರ್ಯಕರ್ತರ ಅನಿಸಿಕೆ. ತನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ ಎಂದು ಜಯಪ್ರದಾ ಸೋಮವಾರ ಆರೋಪಿಸಿದ್ದರು.
(ಏಜೆನ್ಸೀಸ್)
ಪೂರಕ ಓದಿಗೆ:
ಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ
ಜಯಪ್ರದಾ ನಗ್ನ ಸಿಡಿ ಪ್ರಕರಣ
ಸಮಾಜವಾದಿ ಕುಟುಂಬದಲ್ಲಿ ಒಡಕು
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications