ಸಿಪಿಐ(ಎಂ)-ಟಿಎಂಸಿ ಕಾರ್ಯಕರ್ತರ ಮಾರಾಮಾರಿ
ಬಾರಸತ್, (ಪಶ್ಚಿಮ ಬಂಗಾಲ), ಮೇ. 13 : ಅಂತಿಮ ಹಂತದ ಮತದಾನ ಆರಂಭಕ್ಕೂ ಮುಂಚೆ ಪಶ್ಚಿಮ ಬಂಗಾಲದ ಬಾರಸತ್ ಕ್ಷೇತ್ರದ ಬಾಲಿಗುರಿ ಎಂಬಲ್ಲಿ ಸಿಪಿಐ(ಎಂ) ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹಿಂಸಾಚಾರ ಉಂಟಾಗಿ ಒಬ್ಬ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಜರುಗಿದೆ.
ಸಮೀವುಲ್ ಹಕ್ (21) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಸಿಪಿಐಎಂ-ತೃಣಮೂಲ ಪಕ್ಷಗಳ ಕಾರ್ಯಕರ್ತರ ನಡುವೆ ಜಗಳ ಆರಂಭವಾಗಿ ತಾರಕಕ್ಕೇರಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯಿಂದ ಸಮೀವುಲ್ ಹಕ್ ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳ ಸೇರಿ ಕ್ಷೇತ್ರದಾದ್ಯಂತ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
(ಏಜನ್ಸೀಸ್)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications