ಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ

ಚುನಾವಣೋತ್ತರ ಫಲಿತಾಂಶದ ಆಧಾರದ ಮೇಲೆ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರುವುದು ಅಸಾಧ್ಯ ಎಂಬ ಅಂಶದ ಬೆನ್ನಲ್ಲೇ ಎಡಪಕ್ಷಗಳು ಕೂಡಾ ತೃತೀಯ ರಂಗದೊಂದಿಗೆ ಸರಕಾರ ರಚಿಸಬೇಕೇ, ಕಾಂಗ್ರೆಸ್ ನೇತೃತ್ವ ಯುಪಿಎಯೊಂದಿಗೆ ಮತ್ತೆ ಕೈಜೋಡಿಸಬೇಕೇ ಎನ್ನುವ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಅಮೆರಿಕದೊಂದಿಗೆ ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಮಾಡಿಕೊಂಡಿರುವ ನಾಗರಿಕ ಪರಮಾಣು ಒಪ್ಪಂದ ರದ್ದುಗೊಳಿಸಬೇಕು. ಹಾಗೂ ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ ಎ ಕೆ ಎಂಟನಿ ಅವರನ್ನು ಪ್ರಧಾನಿ ಮಾಡಬೇಕು. ಈ ಎರಡು ಷರತ್ತಿಗೆ ಸೋನಿಯಾ ಗಾಂಧಿ ಒಪ್ಪಿಕೊಂಡರೆ ಯುಪಿಎ ಸರಕಾರಕ್ಕೆ ಬಾಹ್ಯ ಬೆಂಬಲ ನೀಡುವ ಕುರಿತು ಎಡಪಕ್ಷಗಳ ಮುಖಂಡರು ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಎಂಟನಿ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಡಪಕ್ಷಗಳ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕೇರಳದ ಕಾಂಗ್ರೆಸ್ಸಿಗರಲ್ಲಿ ಎಂಟನಿ ಪ್ರಧಾನಿಯಾಗುವುದಕ್ಕೆ ಸಂಪೂರ್ಣ ಸಹಮತವಿದೆ. ಆದರೆ, ಎಡಪಕ್ಷಗಳಲ್ಲಿ ಎಲ್ಲ ನಾಯಕರಿಗೂ ಇದಕ್ಕೆ ಸಹಮತವಿಲ್ಲ. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಕಾಂಗ್ರೆಸ್ ಪಕ್ಷದ ಸಹವಾಸವೇ ಬೇಡ ಎನ್ನುತ್ತಿದ್ದರೆ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಎ ಕೆ ಎಂಟನಿ ಪ್ರಧಾನಿ ಮಾಡಿದರೆ ಬಾಹ್ಯ ಬೆಂಬಲ ನೀಡಲು ಅಡ್ಡಿಯಿಲ್ಲ ಎಂದಿದ್ದಾರೆ.
ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ನಮ್ಮ ಕೆಲ ನಿರ್ಧಾರಗಳನ್ನು ರಾಜೀ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ ಎಂದು ಮೂಲಗಳ ತಿಳಿಸಿವೆ. ಒಟ್ಟಿನಲ್ಲಿ ಕೇರಳದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಎಐಸಿಸಿಯಲ್ಲಿ ಹಲವು ಉನ್ನತ ಹುದ್ದೆಗಳನ್ನು ನಿರ್ವಹಿಸಿದ ಅನುಭವವಿರುವ ಎಂಟನಿ ಅವರಿಗೆ ಪ್ರಧಾನಿ ಆಗುವ ಯೋಗ ಬಂದರೆ ಅಚ್ಚರಿಯಿಲ್ಲ.
(ಏಜನ್ಸೀಸ್)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications