ಶಿಕ್ಷಕರ ವರ್ಗಾವಣೆ ಆರಂಭ ಅರ್ಜಿಗಳ ಆಹ್ವಾನ
ಬೆಂಗಳೂರು, ಮೇ. 14 : 2009-10ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ವರ್ಗಾವಣೆ ಬಯಸುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾತ್ರವೇ ಮಾಡಲಾಗುವುದು. ಸುಮಾರು ಏಳು ವಾರಗಳ ವರ್ಗಾವಣೆ ಪ್ರಕ್ರಿಯೆಯು ಮೇ 12 ರಿಂದ ಆರಂಭವಾಗಿ ಜೂನೆ 30 ಕ್ಕೆ ಮುಕ್ತಾಯವಾಗಲಿದೆ.
ಶಿಕ್ಷಕರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಮೇ 13 ರಿಂದ 25 ರೊಳಗಾಗಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಶಿಕ್ಷಣ ಇಲಾಖೆಯು ಅಂತರ್ಜಾಲ ತಾಣ www.schooleducation.kar.nic.in ದಿಂದ ಪಡೆಯಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಿ. ಕುಮಾರ ನಾಯಕ ಅವರು ತಿಳಿಸಿದ್ದಾರೆ. ಭರ್ತಿ ಮಾಡಿದ ಅರ್ಜಿಗಳನ್ನು, ಪ್ರೌಢಶಾಲಾ ಶಿಕ್ಷಕರು ಆಯಾ ಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು ಸಮೂಹ ಸಹಾಯಕ ಶಿಕ್ಷಣಧಿಕಾರಿಗೆ (ಸಿ.ಎ.ಇ.ಇ) ಸಲ್ಲಿಸಬೇಕು.
***
ಸಂಶೋಧನೆಗೆ 48ಲಕ್ಷ ರೂ. ಅನುದಾನ
ಡಾ. ಎಂ. ವಿ. ಶೆಟ್ಟಿ ಮೆಮೊರಿಯಲ್ ಟ್ರಸ್ಟಿನ ಆಶ್ರಯದಲ್ಲಿ ನಡೆಸುತ್ತಿರುವ ಡಾ. ಎಂ. ವಿ. ಶೆಟ್ಟಿ ಕಾಲೇಜ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಪ್ರಾಂಶುಪಾಲರಾದ ಡಾ. ಟಿ. ಎ. ಸುಬ್ಬರಾವ್ ಅವರು ಸಲ್ಲಿಸಿರುವ ಸಾಮಾನ್ಯ ಬಹುಭಾಷೀಯರಲ್ಲಿ ಮೆದುಳಿನ ವಿನ್ಯಾಸದ ಸಂಯೋಜನೆ ಎಂಬ ವಿಷಯದ ಕುರಿತು ಮಾಡುವ ಸಂಶೋಧನೆಗೆ ಭಾರತ ಸರ್ಕಾರದ ನವದೆಹಲಿಯ ವಿಜ್ಞಾನ ಮತ್ತು ತಾಂತ್ರಿಕ ವಿಭಾಗವು ರೂ. 48,32,800ರ ಅನುದಾನವನ್ನು ಮೂರು ವರ್ಷಗಳ ಅವಧಿಗೆ ಮಂಜೂರು ಮಾಡಿದೆ. ಈ ಸಂಶೋಧನೆ ದೇಶದ ಪ್ರತಿಷ್ಠಿತ ಇತರೆ 26 ಸಂಸ್ಥೆಗಳೊಡನೆ ಒಡಂಬಡಿಕೆಯಿಂದ ಎಂದು ಪ್ರಕಟಣೆ ತಿಳಿಸಿದೆ.
***
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಮೇ 15 ರಂದು ಸಂಜೆ 4.30 ಗಂಟೆಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯು ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯುವ ಚುನಾಯಿತ ಸದಸ್ಯರ ವಿಶೇಷ ಸಭೆಯಲ್ಲಿ ನಡೆಸಲಾಗುವುದು. ಈ ಎರಡು ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಂದು ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯವರೆಗೆ ಸದಸ್ಯರು ನಾಮನಿರ್ದೇಶನ ಸಲ್ಲಿಸಬಹುದು. ನಾಮಪತ್ರಗಳ ಪರಿಶೀಲನೆ ನಡೆಸಿ ಸಂಜೆ 4.20 ರೊಳಗಾಗಿ ನಾಮಪತ್ರ ಹಿಂದಕ್ಕೆ ಪಡೆಯಬಹುದಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****
ಲೋಕಸೇವಾ ಆಯೋಗದ ವೆಬ್ಸೈಟ್ನಲ್ಲಿ ಕೀ ಉತ್ತರ ಪ್ರಕಟ
ರಾಜ್ಯದ ವಿವಿಧ ಇಲಾಖೆಗಳಲ್ಲಿನ ತಾಂತ್ರಿಕೇತರ ಹುದ್ದೆಗಳಾದ ಪಶುವೈದ್ಯ ಪಶುಪಾಲನಾ ಪರೀಕ್ಷರು, ಮಾರುಕಟ್ಟೆ ಸಹಾಯಕರು ಮತ್ತು ಗ್ರಂಥಪಾಲಕರ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ಕಳೆದ ಜನವರಿಯಲ್ಲಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಆಯೋಗದ ವೆಬ್ಸೈಟ್ http://kpsc.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆಯೆಂದು ತಿಳಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications