ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ವರುಣ್ ವಿರುದ್ಧದ ಮಾಯಾವತಿ ಅರ್ಜಿ ವಜಾ
ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ನೇತೃತ್ವದ ಪೀಠ ಈ ಆದೇಶ ಹೊರಡಿಸಿದ್ದು, ಯಾವ ಆಧಾರದ ಮೇಲೆ ಅಲಹಾಬಾದ್ ಹೈಕೋರ್ಟ್ ನೇಮಿಸಿದ್ದ ಸಲಹಾ ಮಂಡಲಿ ನೀಡಿದ ತೀರ್ಪು ಪ್ರಶ್ನಿಸಿ ಉತ್ತರ ಪ್ರದೇಶ ಸರಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರಿದೆ. ಕಾರಣವಿಲ್ಲದೇ ಮೇಲ್ಮನವಿ ಸಲ್ಲಿಸುವುದೇ ಸರಿಯೇ ಎಂದು ನ್ಯಾಯಾಲಯ ಮಾಯಾವತಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ತಮ್ಮ ವಿರುದ್ಧ ಉತ್ತರ ಪ್ರದೇಶ ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್ ಕ್ರಮಕ್ಕೆ ಹರ್ಷ ವ್ಯಕ್ತಪಡಿಸಿರುವ ವರುಣ್, ರಾಜಕೀಯ ದುರುದ್ದೇಶಕ್ಕಾಗಿ ಮಾಯಾವತಿ ಅವರು ತಮ್ಮ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಿದ್ದರು. ವಿನಾಕಾರಣ ನನ್ನ ಮೇಲೆ ಎನ್ ಎಸ್ಎ ಹೇರಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಆರೋಪಿಸಿದರು. ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
(ಏಜನ್ಸೀಸ್)
Comments
ಮಾಯಾವತಿ uttar pradesh supreme court ಸುಪ್ರಿಂಕೋರ್ಟ್ nsa ಉತ್ತರ ಪ್ರದೇಶ varun gandhi pilibhit hate speech ವರುಣ್ ಗಾಂಧಿ ಪಿಲಿಭಿತ್
Story first published: Thursday, May 14, 2009, 15:01 [IST]