ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ

ವಿಧಾನಸೌಧದಲ್ಲಿರುವ ತಮ್ಮ ಕಛೇರಿಯಲ್ಲಿ ಇಂದು ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ವ್ಯವಸ್ಥೆಯಿಂದ ಚನ್ನಪಟ್ಟಣ, ರಾಮನಗರ, ಮಾಗಡಿ, ದೊಡ್ಡಬಳ್ಳಾಪುರ, ತುಮಕೂರು, ಚಿಕ್ಕಬಳ್ಳಾಪುರ ಬಾಗದ ಗ್ರಾಮೀಣ ಜನರಿಗೆ ಬಹಳಷ್ಟು ಅನುಕೂಲವಾಗಲಿದೆಯೆಂದು ತಿಳಿಸಿದರು.
ಸ್ಮಾರ್ಟ್ ಕಾರ್ಡ್ ನೀಡಿಕೆ
ಈಗಿರುವ ವಾಹನಗಳ ನೋಂದಣಿ ಮತ್ತು ಚಾಲನಾ ಪರವಾನಗಿಯನ್ನು ಬದಲಾಯಿಸಿ ಸ್ಮಾರ್ಟ್ ಕಾರ್ಡ್ನ್ನು ನೀಡಲಾಗುವುದು. ಈ ಕಾರ್ಡ್ಗಳು ವಿದ್ಯುನ್ಮಾನ ಚಿಪ್ ಹೊಂದಿದ್ದು ಇದರಲ್ಲಿ ವಾಹನ ಹಾಗೂ ವಾಹನ ಮಾಲೀಕರ ಪೂರ್ಣ ವಿವರಗಳು ಲಭ್ಯವಿರುವುದಾಗಿ, ಇದರಿಂದಾಗಿ ದುರುಪಯೋಗವಾಗುವುದನ್ನು ತಡೆಯಬಹುದಾಗಿದೆಯೆಂದು ತಿಳಿಸಿದರು.
ಎಸ್ಎಂಎಸ್ ಮೂಲಕ ವಾಹನದ ವಿವರ
56006 ಕ್ಕೆ ವಾಹನದ ಸಂಖ್ಯೆಯನ್ನು ಎಸ್ಎಂಎಸ್ ಮಾಡಿದಲ್ಲಿ ಯಾವುದೇ ವಾಹನದ ವಿವರಗಳನ್ನು ಪಡೆಯಬಹುದಾಗಿದೆ. ಈ ಸೌಲಭ್ಯದಿಂದ ಅಪಘಾತಗೊಳಿಸಿ ಪರಾರಿಯಾಗುವ ವಾಹನದ ವಿವರಗಳನ್ನು ಕ್ಷಣಾರ್ಧದಲ್ಲಿ ಪತ್ತೆ ಹಚ್ಚಲು ಅನುಕೂಲವಾಗುವುದೆಂದು ಅವರು ತಿಳಿಸಿದರು. 800 ನೂತನ ಸಾಮನ್ಯ ಬಸ್ಸುಗಳನ್ನು ಖರೀದಿಸಲು ಟೆಂಡರ್ ಕರೆಯಲಾಗಿದೆ. ಈ ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವುದು. ಹಳೇ ಮತ್ತು ಹಾಳಾಗಿರುವ ಬಸ್ಸುಗಳನ್ನು ತೆಗೆದು ಹಾಕಲಾಗುವುದು ಎಂದು ತಿಳಿಸಿದ ಅವರು, ವೋಲ್ವೋ ಬಸ್ಸುಗಳ ಟಿಕೆಟ್ ದರವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು. ವೋಲ್ವೋ ಬಸ್ಸು ಸೇವೆಯನ್ನು ಮೈಸೂರು ಮತ್ತು ಮಂಗಳೂರು ನಗರಗಳಿಗೆ ವಿಸ್ತರಿಸಲಾಗುವುದೆಂದು. ಇದರಿಂದಾಗಿ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗುವುದೆಂದು ತಿಳಿಸಿದರು.
ನೇಮಕಾತಿ ಪ್ರಕ್ರಿಯೆ ಪೂರ್ಣ
3000 ಚಾಲಕ, ನಿರ್ವಾಹಕರ ನೇಮಕಾತಿ ಪ್ರಕ್ರಿಯೆಯನ್ನು ಗಣಕೀಕರಣದ ಮೂಲಕ ಪೂರ್ಣಗೊಳಿಸಲಾಗಿದೆ. 1200 ತಾಂತ್ರಿಕ ಸಿಬ್ಬಂದಿಯನ್ನೂ ಸಹಾ ನೇಮಕಾತಿ ಮಾಡಲಾಗಿದೆ. ಇದರಿಂದಾಗಿ ಸಾರಿಗೆ ಸಂಸ್ಥೆಯ ಇತಿಹಾಸದಲ್ಲಿ ಪ್ರಥಮ ಭಾರಿಗೆ ಸಿಬ್ಬಂದಿ ಕೊರತೆ ನೀಗಿಸಿ ನೌಕರರ ಮೇಲಿದ್ದ ಅಧಿಕ ಕೆಲಸದ ಒತ್ತಡವನ್ನು ತೆಗೆಯಲಾಗಿದೆ ಎಂದು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications