ಐಪಿಎಸ್ ಅಧಿಕಾರಿ ನಿಂಬಾಳ್ಕರ್ ಅಮಾನತು
ಬೆಂಗಳೂರು, ಮೇ. 15 : ಲೋಕಾಯುಕ್ತ ದಾಳಿಗೆ ತುತ್ತಾಗಿದ್ದ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಭಯೋತ್ಪಾದನೆ ನಿಗ್ರಹ ದಳದ ಎಸ್ಪಿಯಾಗಿರುವ ಹೇಮಂತ ನಿಂಬಾಳ್ಕರ್ ಅವರ ಮನೆ ಮೇಲೆ ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು. 1998ರ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ನಿಂಬಾಳ್ಕರ್ ಅವರ ಮುಂಬೈ, ಕೊಲ್ಲಾಪುರ ಮತ್ತು ಬೆಳಗಾವಿಗಳಲ್ಲಿರುವ ಮನೆಗಳ ಲೋಕಾಯುಕ್ತರು ದಾಳಿ ನಡೆಸಿದ್ದರು. ದಾಳಿ ವೇಳೆಯಲ್ಲಿ ನಿಂಬಾಳ್ಕರ್ ಅವರಿಗೆ ಸೇರಿದ 1, 48,64,689 ರುಪಾಯಿ ಪತ್ತೆಯಾಗಿತ್ತು. ಇದು ಅವರ ಸೇವಾ ಅವಧಿಯ ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿತ್ತು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications