ಭಾಷಾ ನೀತಿ : ಮೇಲ್ಮನವಿಗೆ ನಿರ್ಧಾರ
ಬೆಂಗಳೂರು, ಮೇ. 15 : ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ವಿರುದ್ಧ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿರುವ ರಾಜ್ಯ ಸರಕಾರ, ಮಾಧ್ಯಮ ನೀತಿ ಉಲ್ಲಂಘಿಸುತ್ತಿರುವ ಶಾಲೆಗಳಿಗೆ ಮಾನ್ಯತೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆ ಮಾಡುತ್ತಿದ್ದರೆ ಅಂತಹ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂಗು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಕೆ ನೀಡಿದ್ದಾರೆ. ಪೋಷಕರು ಇಂತ ಭಾಷಾ ನೀತಿ ಉಲ್ಲಂಘನೆ ಮಾಡುತ್ತಿರುವ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬಾರದು. ಶಾಲೆಗಳು ಸಹ ಪ್ರವೇಶ ಆರಂಭಿಸಬಾರದು ಎಂದು ಹೇಳಿದ್ದಾರೆ.
ಈ ಎಲ್ಲ ಗೊಂದಲ ಗೊತ್ತಿದ್ದು ಪೋಷಕರು ತಪ್ಪು ಮಾಡಿದರೆ ಅದಕ್ಕೆ ಸರಕಾರ ಹೊಣೆಯಲ್ಲ. ಇಂತಹ ಶಾಲೆಗಳಿಗೆ ಸೇರಿಸದೆ ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರವೇಶ ಕೊಡಿಸಬೇಕು. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ರಾಜ್ಯ ಸರಕಾರದ ಅರ್ಜಿ ವಜಾ ಮಾಡಿಲ್ಲ ಎಂದು ಹೇಳಿಕ ಕಾಗೇರಿ, ಕುಸುಮ ಆಕ್ಷೇಪಣಾ ಅರ್ಜಿ ಸಲ್ಲಿಸಲು ಅನಗತ್ಯ ವಿಳಂಬ ಮಾಡುತ್ತಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಲಾಗುತ್ತಿದೆ. ನ್ಯಾಯಾಲಯಕ್ಕೆ ಈಗ ರಜೆ ಇರುವುದರಿಂದ ರಜೆ ಅವಧಿ ಮುಕ್ತಾಯವಾದ ನಂತರ ಮೇಲ್ಮನವಿ ಸಲ್ಲಿಸಲಾಗುತ್ತಿದೆ ಎಂದು ಕಾಗೇರಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)