ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ

ಯುಪಿಎದಿಂದ ಲಾಲು ಹೊರಹೋದಾಗಿನಿಂದ ನಿತೀಶ್ ಕುಮಾರ್ ಅವರಿಗೆ ಕಾಂಗ್ರೆಸ್ ಗಾಳಹಾಕಿದೆ. ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರಂತೂ ಬಿಹಾರ ಮಾದರಿ ರಾಜ್ಯವಾಗಿದೆ. ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯ ಎಂದು ಬಣ್ಣಿಸಿದ್ದರು. ಅಲ್ಲಿಂದ ಶುರುವಾದ ಕೈ ಪಾಳೆಯದ ಗಾಳ, ಇಂದಿಗೂ ಮುಂದುವರೆದಿದೆ. ನಂತರ ಪ್ರಧಾನಿ ಮನಮೋಹನ್ ಸಿಂಗ್ ತಮ್ಮ ಪ್ರತಿ ಭಾಷಣದಲ್ಲಿ ನಿತೀಶ್ ಕುಮಾರ್ ಅವರನ್ನು ಹೊಗಳುತ್ತಾ ಹೋದರು. ನಿತೀಶ್ ಜಾತ್ಯಾತೀತ ವ್ಯಕ್ತಿ. ಅವರು ಯುಪಿಎದಲ್ಲಿರೆ ಉತ್ತಮ ಎನ್ನುವವರೆಗೂ ಮನಮೋಹನ್ ಸಿಂಗ್ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಗಾಳ ಅರಿತ ಎನ್ ಡಿಎ ಮುಖಂಡರು ಒಲೈಕೆಗೆ ಮುಂದಾದರು. ನಿತೀಶ್ ಎನ್ ಡಿಎ ಪರವಿದ್ದಾರೆ. ಅವರು ನಮ್ಮನ್ನು ಬಿಟ್ಟು ಎಂದಿಗೂ ಹೋಗುವುದಿಲ್ಲ ಎಂದು ಹೇಳತೊಡಗಿದರು. ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದ ನಿತೀಶಕುಮಾರ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಶಕ್ತಿ ಪ್ರದರ್ಶನದಲ್ಲಿ ಪಾಲ್ಗೊಂಡು ಕೈ ಪಾಳೆಯದ ನಾಯಕರಿಗೆ ನಿರಾಶೆಗೊಳಿಸಿದರು. ಆದರೂ ಬಿಡದ ಕಾಂಗ್ರೆಸ್ ಮಂದಿ ನಿತೀಶಕುಮಾರ್ ಅವರನ್ನು ತಮ್ಮತ್ತ ಸೆಳೆದುಕೊಳ್ಳುವ ಕಾಯಕವನ್ನು ಮುಂದುವರೆಸಿದರು. ಎರಡು ರಾಷ್ಟ್ರೀಯ ಪಕ್ಷಗಳು ಕಸರತ್ತು ಅರಿತ ನಿತೀಶ್ ಕುಮಾರ್ ಹೊಸ ನಾಟಕ ಶುರು ಮಾಡಿದ್ದಾರೆ. ಬಿಹಾರ್ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಯಾರು ನೀಡುತ್ತಾರೋ ಅವರಿಗೆ ಬೆಂಬಲ ಎಂದು ಹೇಳುವ ಮೂಲವಕ ಬಿಜೆಪಿಗೆ ಆಘಾತ ನೀಡಿದ್ದರೆ, ಯುಪಿಎಗೆ ಹತ್ತಿರವಾಗುವ ಸುಳಿವನ್ನು ನೀಡಿದ್ದಾರೆ.
ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರದ ಯುಪಿಎ ಸರಕಾರ ನಿರಾಕರಿಸಿತ್ತು. ಇದೀಗ ಇದೇ ವಿಷಯವನ್ನು ಮುಂದು ಮಾಡಿರುವ ನಿತೀಶಕುಮಾರ್ ಬೇಡಿಕೆಗೆ ಪ್ರಧಾನಿ ಮನಮೋಹನ್ ಸಿಂಗ್ ಅಸ್ತು ಎಂದಿರುವ ಸುದ್ದಿ ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ಹೊರಬಿದ್ದಿದೆ ಎನ್ನಲಾಗಿದೆ.
(ಏಜನ್ಸೀಸ್)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications