ರಾಯಚೂರು,ಫಲಿತಾಂಶಕ್ಕೆ ಜಿಲ್ಲಾಡಳಿತ ಸಿದ್ದತೆ
ರಾಯಚೂರು, ಮೇ. 15 : ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆಯು ಮೇ 16 ರಂದು ನಡೆಯಲಿದ್ದು, ತ್ವರಿತ ಫಲಿತಾಂಶಕ್ಕಾಗಿ ಜಿಲ್ಲಾಡಳಿತ ಸರ್ವ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆದೋನಿ ಸೈಯದ್ ಸಲೀಂ ತಿಳಿಸಿದರು.
ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತ ಎಣಿಕೆ ಪೂರ್ವ ಸಿದ್ದತೆ ಕುರಿತಂತೆ ಜಿಲ್ಲಾಧಿಕಾರಿ ಆದೋನಿ ಸೈಯದ್ ಸಲೀಂ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮತ ಎಣಿಕೆಗೆ 8 ಕೊಠಡಿಗಳಲ್ಲಿ 98 ಟೇಬಲ್ಗಳ ವ್ಯವಸ್ಥೆ ಮಾಡಿದ್ದು, ಮೇ 16 ರ 11 ರಿಂದ 12 ಗಂಟೆಯೊಳಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಏಪ್ರಿಲ್ 23 ರಂದು ರಾಯಚೂರು ಲೋಕಸಭೆಗೆ ಮತದಾನ ನಡೆದಿದ್ದು ಮೇ 16 ರ ಶನಿವಾರ ಬೆಳಿಗ್ಗೆ 8 ರಿಂದ ಮತ ಎಣಿಕೆ ಕಾರ್ಯ ರಾಯಚೂರು ನಗರದ ಎಲ್ ವಿ ಡಿ ಕಾಲೇಜ್ ಹಾಗೂ ಎಸ್ ಆರ್ ಪಿ ಎಸ್ ಪದವಿ ಪೂರ್ವ ಕಾಲೇಜ್ ಸಂಕೀರ್ಣದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ
ಚುನಾವಣೆ2009
ತಾಜಾ
ಸುದ್ದಿಗಳು