ಮತದಾರರಿಗೆ ದ್ರೋಹ ಬಗೆಯಲಾರೆ : ರಾಘವೇಂದ್ರ

ಅವರು ಇಂದು ಮಧ್ಯಾಹ್ನ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಪಕ್ಷ ಟಿಕೇಟ್ ನೀಡಿದೆ. ಮತದಾರರು ನನ್ನನ್ನು ಅತ್ಯಧಿಕ ಮತ ನೀಡಿ ಗೆಲ್ಲಿಸಿದ್ದಾರೆ. ಮತದಾರರಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಮತದಾರರಿಗೆ ದ್ರೋಹ ಬಗೆಯಲಾರೆ. ಅವರ ಋಣ ತೀರಿಸುವೆ. ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ. ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವೆ ಎಂದರು.
ಪಕ್ಷದ ಹಿರಿಯರು, ಬಿಜೆಪಿಯ ಶಾಸಕರುಗಳು, ಪ್ರಮುಖವಾಗಿ ಕಾರ್ಯಕರ್ತರು ಒಟ್ಟಾಗಿ ನನ್ನನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದಾರೆ. ವಿಶೇಷವಾಗಿ ಬೈಂದೂರು ಕ್ಷೇತ್ರದ ಜನರಿಗೆ ನಾನು ಕೃತಜ್ಞತೆ ಹೇಳಬೇಕು. ಅಲ್ಲಿಯ ಲಕ್ಷ್ಮೀನಾರಾಯಣ್ರವರು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದು ನುಡಿದರು.
ಇದು ತಂದೆಯ ಗೆಲುವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ತಂದೆಯ ಗೆಲುವು ಎನ್ನುವುದಕ್ಕಿಂತ ಇದು ಪಕ್ಷದ ಗೆಲುವು. ಅಭಿವೃದ್ಧಿಯನ್ನು ನೋಡಿ ಜನತೆ ಮತ ನೀಡಿದ್ದಾರೆ. ವಾಜಪೇಯಿ, ಅಡ್ವಾಣಿಯವರ ಆದರ್ಶಗಳು ಇಲ್ಲಿ ಕೆಲಸ ಮಾಡಿವೆ ಎಂದರು. ಜೆಡಿಎಸ್, ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದ್ದರೂ ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲ ನೀಡಿತ್ತು. ಕಳೆದ ಬಾರಿಯೂ ಕೂಡ ಬಂಗಾರಪ್ಪನವರು ಜೆಡಿಎಸ್ನ ಬೆಂಬಲವನ್ನು ಪಡೆದಿದ್ದರು. ಹೀಗಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಕುತಂತ್ರಗಳು ಇಲ್ಲಿ ನಡೆಯಲಿಲ್ಲ ವಿಶ್ಲೇಷಿಸಿದರು.
ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ಮತ್ತು ಜೆಡಿಎಸ್ನ ಅಪ್ಪಾಜಿ ಗೌಡರು ಈ ಬಾರಿಯ ಚುನಾವಣೆಯಲ್ಲಿ ತಟಸ್ಥ ವಹಿಸಿದ್ದರು. ಅದರಲ್ಲೂ ಸಂಗಮೇಶ್ ಬಹಿರಂಗವಾಗಿಯೇ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರಿಗೆ ಬೆಂಬಲ ಸೂಚಿಸಿದ್ದರು. ಹೀಗಾಗಿ ಅಲ್ಲಿ ಬಿಜೆಪಿಗೆ ಅತ್ಯಂತ ಹೆಚ್ಚಿನ ಬಹುಮತ ಸಿಗಬಹುದೆಂದು ನಿರೀಕ್ಷೆ ಇತ್ತು. ಆದರೆ, ಅಲ್ಲಿನ ಹೊಸ ಕಾಂಗ್ರೆಸ್ ಮುಖಂಡರ ಶ್ರಮದ ಫಲವಾಗಿ ಬಂಗಾರಪ್ಪನವರು ಹೆಚ್ಚಿನ ಮತಗಳನ್ನು ಗಳಿಸಲು ಸಾಧ್ಯವಾಯಿತು.
ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸಾಗರ, ಬೈಂದೂರು ಕ್ಷೇತ್ರಗಳ ಜನತೆ ರಾಘವೇಂದ್ರ ಅವರ ಕೈಹಿಡಿದರೆ, ಬಂಗಾರಪ್ಪನವರ ಕೈ ಬಿಟ್ಟಿದ್ದಾರೆ. ಆದರೆ, ತೀರ್ಥಹಳ್ಳಿ, ಸೊರಬದಲ್ಲಿ ಬಂಗಾರಪ್ಪನವರಿಗೆ ಹೆಚ್ಚಿನ ಮತಗಳು ದೊರೆತಿವೆ.
ಮತ ಪಡೆದ ಅಭ್ಯರ್ಥಿಗಳ ವಿವರ
ಜೆ. ಜಯಪ್ಪ (ಬಿಎಸ್ಪಿ) 8204
ಎಸ್.ಬಂಗಾರಪ್ಪ (ಕಾಂಗ್ರೆಸ್) 429796
ಬಿ.ವೈ.ರಾಘವೇಂದ್ರ (ಬಿಜೆಪಿ) 482470
ಸಿ. ಮುರುಗನ್ (ಎಐಜೆಎಂಕೆ) 6046
ಅಖಿಲ್ ಅಹಮ್ಮದ್ (ಸ್ವತಂತ್ರ) 1827
ಡಿ.ಎಸ್.ಈಶ್ವರಪ್ಪ (ಸ್ವತಂತ್ರ) 1917
ಉಮೇಶ್ ಕುಮಾರ್.ಎಸ್. (ಸ್ವತಂತ್ರ) 1355
ಎಂ. ದಿನೇಶ್ ಕುಮಾರ್ (ಸ್ವತಂತ್ರ) 2141
ಮೊಹಿನುದ್ದೀನ್ ಎಂ.ಎಸ್. (ಸ್ವತಂತ್ರ) 1717
ಮಂಜಪ್ಪ ಎಸ್ (ಸ್ವತಂತ್ರ) 3107
ಎಂ.ಪಿ.ಶ್ರೀಧರ್ ಬೈಂದೂರ್ (ಸ್ವತಂತ್ರ) 4565
ಹೆಚ್.ಎಸ್.ಶೇಖರಪ್ಪ (ಸ್ವತಂತ್ರ) 10847
ಒಟ್ಟು 953972
ಪೂರಕ ಓದಿಗೆ
ರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications