ಹಾಸನದಲ್ಲಿ ದೇವೇಗೌಡ ಮುನ್ನಡೆ
ಬೆಂಗಳೂರು, ಮೇ. 16 : ಮದಗಜಗಳ ಕದನ ಎಂದೇ ಪರಿಗಣಿಲ್ಪಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಡುವಿನ ಹೋರಾಟ ಎಂದೇ ಖ್ಯಾತಿ ಪಡೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಹುರಿಯಾಳು ಬಂಗಾರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. 1128 ಮತಗಳಿಂದ ಬಂಗಾರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಸನದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ 1529 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಗುಲ್ಬರ್ಗಾ ದಲ್ಲಿ ರೇವೂ ನಾಯಕರ್ ಬೆಳಮಗಿ, ಬೆಂಗಳೂರು ಕೇಂದ್ರದಲ್ಲಿ ಎಚ್ ಟಿ ಸಾಂಗ್ಲಿಯಾನ 780 ಮತ, ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ, ಹಾವೇರಿಯಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ, ಧಾರವಾಡದಲ್ಲಿ ಬಿಜೆಪಿಯ ಪ್ರಹ್ಲಾದ ಜೋಶಿ ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ 14 ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ 5 ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಪಡೆದಿದೆ.
(ದಟ್ಸ್
ಕನ್ನಡ
ವಾರ್ತೆ)
ಮಹಾಚುನಾವಣೆ
2009
ಫಲಿತಾಂಶ
:
ಕ್ಷಣಕ್ಷಣದ
ಸುದ್ದಿ
ಮಹಾಚುನಾವಣೆ
2009
:
ಕ್ಷಣಕ್ಷಣದ
ಸುದ್ದಿಗಳು