ರಾಘವೇಂದ್ರ, ದೇವೇಗೌಡ ಗೆಲುವು
ಬೆಂಗಳೂರು, ಮೇ. 16 : ಉತ್ತರ ಕನ್ನಡ ಲೋಕಸಭೆ ಫಲಿತಾಂಶ ಕ್ಷೇತ್ರದ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಅವರು ಬಿಜೆಪಿ ಅನಂತಕುಮಾರ್ ಹೆಗಡೆ ವಿರುದ್ದ ಸೋತಿದ್ದಾರೆ. ರಾಷ್ಟ್ರದಲ್ಲಿ ಯುಪಿಎ ಭರ್ಜರಿ ಜಯಭೇರಿ ಬಾರಿಸುತ್ತಿರುವ ಬೆನ್ನಲ್ಲೇ ಮೈಸೂರಿನಲ್ಲಿ ವಿಶ್ವನಾಥ ಹೊರತುಪಡಿಸಿದರೆ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾಗುವ ಫಲಿತಾಂಶ ಹೊರಬೀಳತೊಡಗಿದೆ.
ರಾಷ್ಟದ ಗಮನ ಸೆಳೆದಿದ್ದ ಶಿವಮೂಗ್ಗ ಲೋಕಸಭೆ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರು ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಅವರ ವಿರುದ್ಧ ಭಾರಿ ಮತಗಳ ಅಂತರದಿಂದ ಸೋತಿದ್ದಾರೆ. ರಾಘವೇಂದ್ರ ಅವರು 52, 694 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ನಿರೀಕ್ಷೆಯಂತೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಹಾಸನ ಲೋಕಸಭೆ ಕ್ಷೇತ್ರದಲ್ಲಿ 1. 70 ಲಕ್ಷ ಮತಗಳ ಅಂತರದಿಂದ ಬಿಜೆಪಿಯ ಎಚ್ ಕೆ ಹನುಮೇಗೌಡ ಅವರನ್ನು ಸೋಲಿಸಿದ್ದಾರೆ. ಧಾರವಾಡ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಪಕ್ಷದ ಹುರಿಯಾಳು ಪ್ರಲ್ಹಾದ ಜೋಶಿ ಅವರು ಕಾಂಗ್ರೆಸ್ ಪಕ್ಷದ ಮಂಜುನಾಥ ಕುನ್ನೂರು ಅವರನ್ನು 1.14 ಲಕ್ಷ ಮಕಗಳ ಅಂತರದಿಂದ ಗೆದ್ದಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅವರು ಕಾಂಗ್ರೆಸ್ ಜಯಪ್ರಕಾಶ್ ಹೆಗಡೆ ಅವರನ್ನು ಸೋಲಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications