ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಏಳು ಕ್ಷೇತ್ರಗಳಲ್ಲಿ ಅರಳಿದ ಕಮಲ

By Staff
|
Google Oneindia Kannada News

ಬೆಂಗಳೂರು, ಮೇ. 16 : ಕರ್ನಾಟಕದಲ್ಲಿ ಪ್ರಕಟವಾಗಿರುವ 9 ಲೋಕಸಭೆ ಕ್ಷೇತ್ರಗಳಲ್ಲಿ 7ರಲ್ಲಿ ಭಾರತೀಯ ಜನತಾ ಪಕ್ಷ ಗೆಲುವಿನ ನಗೆ ಬೀರಿದೆ. ಬಳ್ಳಾರಿ, ಬಾಗಲಕೋಟೆ, ಬಿಜಾಪುರ, ಹಾವೇರಿ, ಚಿಕ್ಕೋಡಿ, ಚಿತ್ರದುರ್ಗ, ಬೆಳಗಾವಿ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಲೋಕೋಪಯೋಗಿ ಸಚಿವ ಸಿ ಎಂ ಉದಾಸಿ ಅವರ ಮಗ ಶಿವಕುಮಾರ್ ಉದಾಸಿ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿಯ ಸಮೀಪಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲೀಂ ಆಹ್ಮದ್ ಅವರನ್ನು ಸುಮಾರು 86 ಸಾವಿರ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ.

ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿಯ ಜೆ ಶಾಂತಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎನ್ ವೈ ಹನುಮಂತಪ್ಪ ಅವರನ್ನು 2243 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಅಂಗಡಿ ಅವರು ಕಾಂಗ್ರೆಸ್ ನ ಅಮರ ಸಿಂಹ್ ಪಾಟೀಲ್ ವಿರುದ್ದ ಜಯಭೇರಿ ಗಳಿಸಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಗದ್ದೀಗೌಡರು ಕಾಂಗ್ರೆಸ್ ಅಭ್ಯರ್ಥಿ ಜಿ ಟಿ ಪಾಟೀಲ್ ವಿರುದ್ಧ 36 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಕತ್ತಿ ಜಯಗಳಿಸಿದ್ದಾರೆ. ಬಿಜಾಪುರದಲ್ಲಿ ಬಿಜೆಪಿಯ ರಮೇಶ್ ಜಿಗಜಿಣಗಿ ಅವರು ಕಾಂಗ್ರೆಸ್ ಪ್ರಕಾಶ್ ರಾಠೋಡ ಅವರನ್ನು ಸುಮಾರು 42,404 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಚಿತ್ರದುರ್ಗದಲ್ಲಿ ಜನಾರ್ದನಸ್ವಾಮಿ ಗೆಲುವು ಸಾಧಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X