ಭಾರಿ ಮುಖಭಂಗ ಅನುಭವಿಸಿದ ಕಟ್ಟಾಳುಗಳು
ಕೇಂದ್ರ ಗೃಹಸಚಿವ ಪಿ ಚಿದಂಬರಂ (ಕಾಂಗ್ರೆಸ್) ಅವರು ಎಐಎಡಿಎಂಕೆಯ ರಾಜ ಕಣ್ಣಪ್ಪ ವಿರುದ್ಧ 3,555 ಮತಗಳ ಅಂತರದಲ್ಲಿ ಶಿವಗಂಗೆ ಲೋಕಭೆ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್ ಗೆ ಗೇಟ್ ಪಾಸ್
ಪ್ರತಿಷ್ಠಿತ ಅನ್ನಿಸಿದ್ದ ಬಿಹಾರದ ಹಾಜಿಪುರ ಕ್ಷೇತ್ರದ ಸ್ಪರ್ಧಿರಾಮ್ ವಿಲಾಸ್ ಪಾಸ್ವಾನ್ ಸೋಲನುಭವಿಸಿದ್ದಾರೆ. ಜೆಡಿ(ಯು)ನ ರಾಮ್ ಸುಂದರ್ ದಾಸ್ ವಿರುದ್ಧ 25,000 ಮತಗಳ ಭಾರಿ ಅಂತರದಿಂದ ಸೋತಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿಯಾಗಿದ್ದ ದಾಸ್ ರಾಜ್ಯ ರಾಜಕಾರಣದಲ್ಲಿ ಉತ್ತಮ ಹೆಸರು ಮಾಡಿದ್ದರು.
ದಕ್ಷಿಣ ಕನ್ನಡದಲ್ಲಿ ಪೂಜಾರಿಗೆ ಮಂಗಳಾರತಿ
ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ಮುಖಂಡ ಬಿ ಜನಾರ್ದನ ಪೂಜಾರಿ ಅವರು ಬಿಜೆಪಿಯ ನಳಿನ್ ಕುಮಾರ್ ಕಟೀಲ್ ವಿರುದ್ಧ 40,420ಮತಗಳ ಅಂತರದಿಂದ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ.
ಮೇನಕಾಗಾಂಧಿಯನ್ನು ಕೈಬಿಟ್ಟ ಮತದಾರ
ಅನೋಲ(ಉತ್ತರ ಪ್ರದೇಶ) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ಅಭ್ಯರ್ಥಿ ಮೇನಕಾ ಗಾಂಧಿ ಅವರನ್ನು ಸಮಾಜವಾದಿ ಪಕ್ಷದ ಧರ್ಮೇಂದ್ರ ಕಶ್ಯಪ್ ಪರಾಭವಗೊಳಿಸಿದ್ದಾರೆ.
ಪಂಚಮಹಲ್ಸ್ ನ್ನು ಕಳೆದುಕೊಂಡ ವಗೇಲಾ
ಕಾಂಗ್ರೆಸ್ ನ ಕಟ್ಟಾಳು ಕೇಂದ್ರ ಸಚಿವ ಶಂಕರ್ ಸಿನ್ಹಾ ವಗೇಲಾ ಅವರು ಗುಜರಾತ್ ನ ಪಂಚಮಹಲ್ಸ್ ಕ್ಷೇತ್ರದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದಾರೆ. ಬಿಜೆಪಿಯ ಪ್ರಭಾತ್ ಸಿನ್ಹಾ ಚೌಹಾಣ್ ರ ವಿರುದ್ಧ 2,090 ಮತಗಳ ಅಂತರದಿಂದ ಸೋತಿದ್ದಾರೆ.
ಉತ್ತರ ಕನ್ನಡದಲ್ಲಿ ಮ್ಯಾಗಿ ಪಟಾಕಿ ಠುಸ್
ಕಾಂಗ್ರೆಸ್ ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ ಉತ್ತರ ಕನ್ನಡದಲ್ಲಿ ಬಿಜೆಪಿಯ ಅನಂತಕುಮಾರ್ ಹೆಗಡೆ ವಿರುದ್ಧ 22, 769 ಮತಗಳ ಅಂತರದಿಂದ ಸೋತು ಸುಣ್ಣವಾಗಿದ್ದಾರೆ. 2004ರ ಚುನಾವಣೆಯಲ್ಲೂ ಮ್ಯಾಗಿ ಹೆಗಡೆ ವಿರುದ್ಧ ಸೋತಿದ್ದರು.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications