ಸಿಧುಗೆ ಹ್ಯಾಟ್ರಿಕ್, ಅಜರ್ ಗೆ ಪ್ರಥಮ ಚುಂಬನ

ಅಜರ್ ಕಮಾಲ್: ಭಾರತ ಕ್ರಿಕೆಟ್ ತಂಡದ ಯಶಸ್ವಿ ಮಾಜಿ ನಾಯಕಮೊ ಹಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ಕಾಂಗ್ರೆಸ್ ಪರ ಸ್ಪರ್ಧಿಸಿ 49,107 ಮತಗಳ ಅಂತರದಿಂದ ಸಮೀಪ ಪ್ರತಿಸ್ಪರ್ಧಿ ಕನ್ವರ್ ಸರ್ವೇಶ್ ಅವರನ್ನು ಸೋಲಿಸಿದ್ದಾರೆ. ಮುಸ್ಲಿಮರ ಓಲೈಕೆ ಕಾಂಗ್ರೆಸ್ ಪರ ಮತ ಬೀಳುವಲ್ಲಿ ಅಜರ್ 301283 ಮತ ಗಳಿಸಿದರೆ, ಎದುರಾಳಿ ಸರ್ವೇಶ್ 252176 ಮತಗಳಿಸಿದ್ದಾರೆ.
ಕರ್ನಾಟಕದ ಮಾಜಿ ರಣಜಿ ಆಟಗಾರ ಪ್ರಕಾಶ್ ರಾಥೋಡ್ ಬಿಜಾಪುರದಲ್ಲಿ ಕಾಂಗ್ರೆಸ್ ಪರ ಸ್ಪರ್ಧಿಸಿ, ಬಿಜೆಪಿಯ ರಮೇಶ್ ಜಿಗಜಿಣಗಿ ವಿರುದ್ಧ ಉತ್ತಮ ಹೋರಾಟ ನೀಡಿದರೂ 48,404 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಕೀರ್ತಿ ಅಜಾದ್ ಬಿಹಾರ್ ನ ದರ್ಭಾಂಗಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮಾನವ ಸಂಪನ್ಮೂಲ ರಾಜ್ಯ ಸಚಿವ ಮಹಮ್ಮದ್ ಆಲಿ ಅಶ್ರಫ್ ವಿರುದ್ಧ 36, 444 ಮತಗಳಿಂದ ಅಚ್ಚ್ಚರಿಯ ಗೆಲುವು ಸಾಧಿಸಿದ್ದಾರೆ. 1983 ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ ಕೀರ್ತಿ ಅಜಾದ್, ಈ ಮೂಲಕ ಬಿಜೆಪಿಗೆ ಕೀರ್ತಿ ತಂದಿದ್ದಾರೆ.
ನವಜೋತ್ ಸಿಂಗ್ ಸಿಧು ಅಮೃತಸರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ನ ಒ ಪಿ ಸೋನಿ ವಿರುದ್ಧ 6858 ಮತಗಳಿಂದ ಜಯ ಗಳಿಸಿದ್ದಾರೆ. ಈ ಹಿಂದೆ 2004ರಲ್ಲಿ ಹಾಗೂ 2007 ರ ಮರು ಮತದಾನದಲ್ಲಿ ಸಿಧು ಜಯಭೇರಿ ಬಾರಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಚೇತನ್ ಚೌಹಾಣ್ ಪೂರ್ವ ದೆಹಲಿಯಿಂದ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿ ಸಂದೀಪ್ ದೀಕ್ಷಿತ್ ವಿರುದ್ಧ 2.4ಲಕ್ಷ ಮತಗಳಿಂದ ಹೀನಾಯ ಸೋಲುಂಡಿದ್ದಾರೆ.
ಶೂಟಿಂಗ್ ಚಾಂಪಿಯನ್ ಜಸ್ಪಾಲ್ ರಾಣಾ ಅವರು ಉತ್ತರಖಂಡದ ತಿಹರಿ ಗರ್ವಾಲ್ ಕ್ಷೇತ್ರದಲ್ಲಿ , ಫರಿದಾಬಾದ್ ನಿಂದ ಚೇತನ್ ಶರ್ಮಾ, ಭಟಿಂಡಾದಲ್ಲಿ ಶೂಟರ್ ರಣೀಂದರ್ ಸಿಂಗ್ ಸೋತ ಇತರ ಪ್ರಮುಖರು.
(ಏಜೆನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications