ಕಾಂಗ್ರೆಸ್ 'ವಾರ್ ರೂಂ'ನಲ್ಲಿ ರಾಹುಲ್ ಚಹಾ ಕೂಟ!

ಅಜ್ಮೀರ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಸಚಿನ್ ಪೈಲಟ್ ಮಾತನಾಡುತ್ತಾ, ರಾಹುಲ್ ರ ಶ್ರಮದ ಫಲವೇ ಈ ಗೆಲುವು ಎಂದರು. ಯುವ ಮತದಾರರನ್ನು ರಾಹುಲ್ ಆಕರ್ಷಿಸಿದ್ದು ಕಾಂಗ್ರೆಸ್ ಗೆಲುವಿಗೆ ಕಾರಣವಾಯಿತು ಎಂದು ನವದೆಹಲಿಯ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದ ಪೈಲಟ್ ಹೇಳಿದರು.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಪತ್ಯ ಸಾಧಿಸಲು ರಾಹುಲ್ ಗಾಂಧಿ ಪಾತ್ರ ಅವಿಸ್ಮರಣೀಯ ಎಂದು ಆ ರಾಜ್ಯದಿಂದ ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಜಿತಿನ್ ಪ್ರಸಾದ್ ಹೇಳಿದರು. ಮನಮೋಹನ್ ಸಿಂಗ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸುಸ್ಥಿರ, ಸುಭದ್ರ ಮತ್ತು ಕ್ರಿಯಾತ್ಮಕ ಸರಕಾರವನ್ನು ನೀಡಲಿದೆ ಎಂದರು.
ಜಾತಿ ಆಧಾರಿತ ರಾಜಕೀಯವನ್ನು ಬದಿಗಿಟ್ಟ ಉತ್ತರ ಪ್ರದೇಶದ ಮತದಾರರು ಅಭಿವೃದ್ಧಿ ಪರ ವಾಲಿದ್ದಾರೆ. ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಕಾಂಗ್ರೆಸ್ ನ ಯುವ ನಾಯಕರಾದ ಜ್ಯೋತಿರಾದಿತ್ಯ ಶಿಂಡ್ಯಾ, ಮಿಲಿಂದ್ ಡಿಯೋರಾ, ದೀಪೇಂದ್ರ ಹೂಡ, ಅಶೋಕ್ ತನ್ವರ್, ಮೀನಾಕ್ಷಿ ನಟರಾಜನ್ ಮತ್ತು ಭನ್ ವರ್ ಜಿತೇಂದ್ರ ಸಿಂಗ್ ಭಾಗವಹಿಸಿದ್ದರು.
ರಾಹುಲ್ ಟೀ ಪಾರ್ಟಿ
ಏತನ್ಮಧ್ಯೆ ರಾಹುಲ್ ಗಾಂಧಿ ಪಕ್ಷದ ಸದಸ್ಯರನ್ನು ಟೀ ಪಾರ್ಟಿಗೆ ಆಹ್ವಾನಿಸಿದ್ದರು. ಪಕ್ಷದ ಫಲಿತಾಂಶದ ಬಗ್ಗೆ ಹಾಗೂ ಮುಂದಿನ ನಿರ್ಧಾರಗಳ ಬಗ್ಗೆ ಚಹಾ ಕೂಟದಲ್ಲಿ ಚರ್ಚಿಸಲಾಯಿತು. ವಿವಿಧ ರಾಜ್ಯಗಳಲ್ಲಿ ಗೆದ್ದಿರುವ ಪಕ್ಷದ ಹುರಿಯಾಳುಗಳನ್ನು ಚಹಾ ಕೂಟಕ್ಕೆ ಆಹ್ವಾನಿಸಲಾಗಿತ್ತು. ಇವರೊಂದಿಗೆ ರಾಹುಲ್ ಚರ್ಚಿಸಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷದ 'ವಾರ್ ರೂಮ್' ಎಂದೇ ಖ್ಯಾತಿ ಪಡೆದಿರುವ ನವದೆಹಲಿಯ 15ನೇ ರಾಕಬ್ ಗಂಜ್ ರಸ್ತೆಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಚಹಾ ಕೂಟ ನಡೆದದ್ದು ವಿಶೇಷವಾಗಿತ್ತು.
(ಏಜೆನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications