ರೆಡ್ಡಿಗಳ ಸೊಕ್ಕಡಗಿಸಲು ದೇವೇಗೌಡರ ತಂತ್ರ

ಇದೇ ಕಾರಣಕ್ಕೆ ಕುಮಾರಸ್ವಾಮಿ ಭಾನುವಾರ ಸಂಜೆ ದಿಲ್ಲಿಗೆ ತೆರಳಿದ್ದಾರೆ. ಇಂದು ಮಧ್ಯಾಹ್ನದ ಹೊತ್ತಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ. ಒಂದು ಮೂಲದ ಪ್ರಕಾರ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿದರೆ ಮುಂಬರುವ ಎಲ್ಲ ಚುನಾವಣೆಗಳಿಗೂ ಅನುಕೂಲದ ಜೊತೆಗೆ ರಾಜ್ಯದ ಬಿಜೆಪಿ ಸರಕಾರವನ್ನು ಸಮರ್ಥವಾಗಿ ಎದುರಿಸಬಹುದು ಎನ್ನುವುದು ಹೈಕಮಾಂಡ್ ಲೆಕ್ಕಾಚಾರ.
ಬಳ್ಳಾರಿ ಜನಾರ್ದನರೆಡ್ಡಿ ಹಣಿಯಲು ಕುಮಾರಸ್ವಾಮಿ ಅವರು ಕೇಂದ್ರದ ಅರಣ್ಯ ಪರಿಸರ ಮತ್ತು ಭೂಸಾರಿಗೆ ಖಾತೆಗೆ ಬಾರಿ ಲಾಭಿ ನಡೆಸಿದ್ದಾರೆ ಎನ್ನಲಾಗಿದೆ. ಅದು ತಪ್ಪಿದರೆ, ರೇಲ್ವೆ ಖಾತೆಯಾದರೂ ನೀಡಿ ಎಂದು ಸೋನಿಯಾ ಎದುರು ಮನವಿ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯದ ಪ್ರತಿಪಕ್ಷದ ನಾಯಕ ಸ್ಥಾನ ತ್ಯಜಿಸಿರುವ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿಗಳಾದ ಎನ್ ಧರ್ಮಸಿಂಗ್, ವೀರಪ್ಪ ಮೊಯ್ಲಿ, ಎಸ್ ಎಂ ಕೃಷ್ಣ, ಹಾಲಿ ಕೇಂದ್ರದ ಸಚಿವ ಕೆ ಎಚ್ ಮುನಿಯಪ್ಪ ಎಲ್ಲರೂ ಮಂತ್ರಿಗಿರಿಯ ಆಕಾಂಕ್ಷಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎಲ್ಲ ನಾಯಕರನ್ನು ಬದಿಗೊತ್ತಿ ಕುಮಾರಸ್ವಾಮಿ ಅವರಿಗೆ ದೊಡ್ಡ ಖಾತೆ ನೀಡಲು ಸೋನಿಯಾ ಮನಸ್ಸು ಮಾಡಿಯಾರೇ ಎನ್ನುವುದು ಕುತೂಹಲ.
ಇನ್ನೊಂದು ಮೂಲಗಳ ಪ್ರಕಾರ, ರಾಜ್ಯದಲ್ಲಿ ಪಕ್ಷದ ಸ್ಥಿತಿ ಹೀನಾಯವಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರನ್ನು ತೆಗೆದುಹಾಕುವ ಸುದ್ದಿಯೂ ಇದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಕೂರಿಸಿ, ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಚಿವ ಜಿ ಪರಮೇಶ್ವರ್ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಸಿದ್ದು ಉತ್ತಮ ಸಂಘಟನಾ ಚತುರ, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಪಕ್ಷವನ್ನು ಕಟ್ಟಲು ಅವರೇ ಸೂಕ್ತ ಎನ್ನುವ ಮಾತು ಕೇಳಿಬರುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಿರುವ ಸಿದ್ದು ಅಧ್ಯಕ್ಷಗಿರಿಗೆ ಮನಸ್ಸು ಮಾಡುತ್ತಾರೆಯೇ ?
(ದಟ್ಸ್ ಕನ್ನಡ ವಾರ್ತೆ)
ಸೋನಿಯಾ ಭೇಟಿಯ ಮರ್ಮ ಬಿಟ್ಟುಕೊಟ್ಟ ಎಚ್ಡಿಕೆ!
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications