Get Updates
Get notified of breaking news, exclusive insights, and must-see stories!

ಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು

Five Killed as Bus Rams into Stranded Timber-laden Lorry at Udane
ಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಮೃತಪಟ್ಟಿವರ ಹೆಚ್ಚಿರುವ ಸಾಧ್ಯತೆಯಿದ್ದು, ಗುರುತು ಪಚ್ಚೆ ಕಾರ್ಯ ಸಾಗಿದೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಪುಟ್ಟ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಸ್ ಆರ್ ಟಿಸಿ ಬಸ್ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಉದಾನೆ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ.ಘಟನೆ ನಡೆದ ಸಮಯದಲ್ಲಿ ಟಿಂಬರ್ ಲಾರಿ ಪಾರ್ಕಿಂಗ್ ದೀಪ ಹಾಕಿರಲಿಲ್ಲ, ಜೋರು ಮಳೆ ಸುರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+