ಎಚ್ಡಿಕೆ ಸಂಪುಟಕ್ಕೆ : ಸಿದ್ದು ತೀವ್ರ ವಿರೋಧ

Siddaramaiah
ಬೆಂಗಳೂರು, ಮೇ. 18 : ಕೇಂದ್ರದಲ್ಲಿ ನೂತನವಾಗಿ ರಚನೆಯಾಗಲಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಲ್ಲಿ ಜೆಡಿಎಸ್ ಬೆಂಬಲವನ್ನು ತೆಗೆದುಕೊಳ್ಳಬಾರದು ಎಂದು ಹೈಕಮಾಂಡ್ ಗೆ ಮನವಿಮಾಡಿಕೊಳ್ಳಲು ದೇವೇಗೌಡರ ಬದ್ಧ ರಾಜಕೀಯ ವೈರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನುವ ಸಂಗತಿ ದಟ್ಟವಾಗಿದೆ. ಕುಮಾರಸ್ವಾಮಿ ಅವರು ಕೇಂದ್ರ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗುತ್ತಾರೆ ಎನ್ನುವ ಸುದ್ದಿಯ ಬೆನ್ನಲ್ಲೆ ಸಿದ್ದು ಅಸಮಾಧಾನಗೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಾಮರಾಜನಗರ ಮತ್ತು ಮೈಸೂರು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸಿಲು ಸಿದ್ದು ಪ್ರಮುಖ ಪಾತ್ರ ವಹಿಸಿದ್ದಾರೆ. ಖರ್ಗೆ ತೆರವುಗೊಳಿಸಿರುವ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಸಿದ್ದು ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಸಿದ್ದು ಬಿಟ್ಟರೆ ಮೈಸೂರು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ ಎಚ್ ವಿಶ್ವನಾಥ್ ಕೆಪಿಸಿಸಿ ಗದ್ದುಗೆ ಏರುವ ಲಕ್ಷಣಗಳಿವೆ .ಆದರೆ, ಕುಮಾರಸ್ವಾಮಿ ಅವರು ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಲ್ಲಿ ಸಚಿವರಾಗುವುದು ಸಿದ್ದುಗೆ ಎಳ್ಳಷ್ಟು ಇಷ್ಟವಿಲ್ಲ.

ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಂಡಾಗ ಜೆಡಿಎಸ್ ಪಕ್ಷ ಯುಪಿಎ ಸರಕಾರವನ್ನು ಬೆಂಬಲಿಸಲಿಲ್ಲ ಎನ್ನುವ ಆರೋಪ ಸಿದ್ದು ಆಪ್ತ ವಲಯದಿಂದ ಕೇಳಿ ಬಂದಿದೆ. ಯುಪಿಎ ಸರಕಾರಕ್ಕೆ ಜೆಡಿಎಸ್ ಬೆಂಬಲ ನೀಡುವುದು ಕೆಲ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಅಚ್ಚರಿ ತಂದಿದೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಳ್ಳಾರಿ, ಶಿವಮೊಗ್ಗ ಸೇರಿ ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಿರಲಿಲ್ಲ. ಅಲ್ಲದೇ ಫಲಿತಾಂಶಕ್ಕೂ ಒಂದು ದಿನದ ಮುಂಚೆ ಕುಮಾರಸ್ವಾಮಿ ಅವರು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಯುಪಿಎಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿರುವ ಹೈಕಮಾಂಡ್ ಕುಮಾರಸ್ವಾಮಿ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ತೀರ್ಮಾನಿಸಿದೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:
ರೆಡ್ಡಿಗಳ ಸೊಕ್ಕಡಗಿಸಲು ದೇವೇಗೌಡರ ತಂತ್ರ
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+