ಯುಪಿಎ ಸರಕಾರದ ರಚನೆ ಕಸರತ್ತು ಆರಂಭ
ನವದೆಹಲಿ, ಮೇ. 16 : ನಿರೀಕ್ಷೆಗೂ ಮೀರಿ ದಿಗ್ವಿಜಯ ಸಾಧಿಸಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚನೆಗೆ ಕಸರತ್ತು ಆರಂಭಿಸಿದೆ. ಸಂಪುಟದ ಪ್ರಮುಖ ಖಾತೆಗಳ ಚೌಕಾಶಿ ಆರಂಭವಾಗಿದೆ. ಒಂದು ಮೂಲದ ಪ್ರಕಾರ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಗೆ ಸಂಪುಟ ಸೇರಲು ಭಾರಿ ಒತ್ತಡ ಬರುತ್ತಿದೆ.
ರಾಹುಲ್ ಒಪ್ಪಿದರೆ, ಮಾನವ ಸಂಪನ್ಮೂಲ ಖಾತೆ ಇಲ್ಲವೇ ಗ್ರಾಮೀಣಾಭಿವೃದ್ಧಿ ಖಾತೆ ನೀಡಲು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮನಸ್ಸು ಮಾಡಿದ್ದಾರೆ. ಆದರೆ, ಹಳೆಯ ಮೈತ್ರಿ ಪಕ್ಷಗಳಿಗೆ ಸಚಿವ ಸ್ಥಾನ ನೀಡಲು ಸೋನಿಯಾ ನಿರಾಕರಿಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಯೋಜನಾ ಆಯೋಗದ ಅಧ್ಯಕ್ಷರಾಗಿರುವ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅವರಿಗೆ ಅರ್ಥ ಖಾತೆ, ತೃಣಮೂಲ ಕಾಂಗ್ರೆಸ್ ಪಕ್ಷ ನಾಯಕಿ ಮಮತಾ ಬ್ಯಾನರ್ಜಿ, ಪ್ರಣಬ್ ಮುಖರ್ಜಿ ಅವರಿಗೆ ವಿದೇಶಾಂಗ, ಪಿ ಚಿದಂಬರಂ ಅವರಿಗೆ ಗೃಹ ಖಾತೆ, ಎ ಕೆ ಎಂಟನಿ ಅವರಿಗೆ ರಕ್ಷಣಾ ಖಾತೆ ನೀಡುವುದು ಬಹುಕೇತ ಖಚಿತವಾಗಿದೆ.
ಸಂಸದರಾದ ಮುರಳಿ ದಿಯೋರಾ, ವೀರಪ್ಪ ಮೊಯ್ಲಿ, ವೈಯಲಾರ್ ರವಿ, ಸಲ್ಮಾನ್ ಖುರ್ಷಿದ್, ಗಿಲಾಮ್ ನಬಿ ಅಜಾದ್, ಕಮಲನಾಥ್, ಎಸ್ ಎಂ ಕೃಷ್ಣ, ಅಂಬಿಕಾ ಸೋನಿ, ಆನಂದ ಶರ್ಮಾ, ಭಕ್ತ ಚರನ್ ದಾಸ್, ಕಪಿಲ್ ಸಿಬಲ್ ಇವರು ಕಾಂಗ್ರೆಸ್ ಪಕ್ಷದ ಸಂಸದರಾದರೆ, ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ, ಫಾರೂಕ್ ಅಬ್ದುಲ್ಲಾ, ಶರದ್ ಪವಾರ್, ಪ್ರಫುಲ್ಲ ಪಟೇಲ್, ದಯಾನಿಧಿ ಮಾರನ್, ಎಂ ಕೆ ಅಳಗಿರಿ ಅವರು ಸಚಿವರಾಗುವ ಸಾಧ್ಯತೆಗಳಿವೆ.
(ಏಜನ್ಸೀಸ್)
ರಾಹುಲ್ ಅಲ್ಲ ಸಿಂಗ್ ಅವರೇ ಪ್ರಧಾನಿ : ಸೋನಿಯಾ
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications