ಯುಪಿಎಗೆ ಮಾಯಾವತಿ ಬಾಹ್ಯ ಬೆಂಬಲ

ಫಲಿತಾಂಶದ ನಂತರ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಶುಭಾಶಯ ಕೋರಲಾಗಿದೆ. ಅಂದು ಪ್ರಧಾನಿ ಸಿಂಗ್ ಅವರು, ಜಾತ್ಯಾತೀತ ಸರಕಾರ ರಚಿಸಲು ಬಿಎಸ್ಪಿ ಪಕ್ಷ ಯುಪಿಎಗೆ ಬೆಂಬಲ ನೀಡುವಂತೆ ಕೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿಎಸ್ಪಿ ಪ್ರಧಾನಿ ಅವರ ಮನವಿಯನ್ನು ಪುರಸ್ಕರಿಸಿ ಯುಪಿಎಗೆ ಯಾವುದೇ ಷರತ್ತಿಲ್ಲದೆ ಬೆಂಬಲ ನೀಡುವುದಾಗಿ ಮಾಯಾವತಿ ತಿಳಿಸಿದ್ದಾರೆ.
ಬಿಎಸ್ಪಿಯ ರಾಷ್ಟ್ರೀಯ ಕಾರ್ಯಾಕಾರಿ ಸಮಿತಿ ಹಾಗೂ ಸಂಸದೀಯ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ವಿವಿಧ ವಿಷಯಗಳ ಬಗ್ಗೆ ಕೊನೆಗೆ ಯುಪಿಎ ಸರಕಾರಕ್ಕೆ ಬಾಹ್ಯ ಬೆಂಬಲ ನೀಡಲು ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.
(ಏಜನ್ಸೀಸ್)












Click it and Unblock the Notifications