ಟಿಡಿಪಿ ಸೋಲು : ಒಬ್ಬನ ಆತ್ಮಹತ್ಯೆ
ಗುಂಟೂರು, ಮೇ. 19 : ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ನೇತೃತ್ವದ ಪ್ರಜಾರಾಜ್ಯಂ ಪಕ್ಷ ಚುನಾವಣೆಯಲ್ಲಿ ದಾರುಣ ಸೋಲು ಕಂಡಿದ್ದರಿಂದ ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬೆನ್ನಲ್ಲೇ ತೆಲುಗು ದೇಶಂ ಪಕ್ಷದ ಕಾರ್ಯಕರ್ತನೊಬ್ಬ ಪಕ್ಷದ ನೀರಸ ಪ್ರದರ್ಶನದಿಂದ ಬೇಸತ್ತು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಟೂರಿನ ಪಿರಂಗಿಪುರಂ ಗ್ರಾಮದಲ್ಲಿ ನಡೆದಿದೆ.
ಲಾರಿ ಚಾಲಕ ಎಂ ರಾಮುಡು (26) ಮೃತಪಟ್ಟ ವ್ಯಕ್ತಿ. ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಟಿಡಿಪಿ ಪಕ್ಷ ಸೋತಿರುವುದಕ್ಕೆ ತೀವ್ರ ಬೇಸರ ಉಂಟಾಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಟಿಡಿಪಿ ಚುನಾವಣೆಯಲ್ಲಿ ಗೆಲ್ಲದಿರುವುಕ್ಕೆ ಪ್ರಾಣ ಕಳೆದುಕೊಳ್ಳಲು ನಿರ್ಧರಿಸಿದ್ದೇನೆ ಎಂದು ಪತ್ರ ಬರೆದು ಸಾವಿಗೀಡಾದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications