ಬಿಜೆಪಿ ಕತೆ ಪರದೆ ಮೇಲೆ ನೋಡಿ ಆನಂದಿಸಿ, ಸಿದ್ದು

Siddaramaiah
ಬೆಂಗಳೂರು, ಮೇ. 20 : ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಶೀಘ್ರದಲ್ಲಿ ಆಂತರಿಕ ಭಿನ್ನಮತ ತಲೆದೋರಲಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಕತೆ ಏನಾಗಲಿದೆ ಎಂಬುದನ್ನು ಪರದೆ ಮೇಲೆ ನೋಡಿ ಆನಂದಿಸಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವನ್ನು ಪ್ರತಿಪಕ್ಷಗಳು ಅಭದ್ರಗೊಳಿಸುವ ಪ್ರಶ್ನೆಯೇ ಇಲ್ಲ ಎಂದರು. ಬಿಜೆಪಿಯಲ್ಲಿ ಈಗಾಗಲೇ ಕಚ್ಚಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ತೀವ್ರಗೊಂಡು ಸರಕಾರ ತನ್ನಿಂದ ತಾನೇ ಸರಕಾರ ಅಭದ್ರಗೊಳ್ಳಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಪ್ರತಿಪಕ್ಷಗಳು ಸರಕಾರವನ್ನು ಅಭದ್ರಗೊಳಿಸಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದು, ದುರಾಡಳಿತದ ಮೂಲಕ ಯಡಿಯೂರಪ್ಪ ಜನರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ಅವರ ಪಕ್ಷದಲ್ಲೇ ಆಂತರಿಕ ಭಿನ್ನಮತ ಸ್ಪೋಟಗೊಳ್ಳಲಿದೆ. ಯಪಿಎ ಸರಕಾರಕ್ಕೆ ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೂ ಅದಕ್ಕೂ ಸಂಬಂಧವಿಲ್ಲ. ಖರ್ಗೆ ಅವರಿಂದ ತೆರವಾಗಿರುವ ಸ್ಥಾನವನ್ನು ನನಗೆ ನೀಡಿದರೆ ಸರಕಾರಕ್ಕೆ ವಿರುದ್ಧ ಹೋರಾಟ ನಡೆಸಲು ರೂಪುರೇಷೆ ಸಿದ್ದಪಡಿಸುವುದಾಗಿ ಸಿದ್ದರಾಮಯ್ಯ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+