ಬಿಜೆಪಿ ಕತೆ ಪರದೆ ಮೇಲೆ ನೋಡಿ ಆನಂದಿಸಿ, ಸಿದ್ದು

ಬೆಂಗಳೂರಿನಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವನ್ನು ಪ್ರತಿಪಕ್ಷಗಳು ಅಭದ್ರಗೊಳಿಸುವ ಪ್ರಶ್ನೆಯೇ ಇಲ್ಲ ಎಂದರು. ಬಿಜೆಪಿಯಲ್ಲಿ ಈಗಾಗಲೇ ಕಚ್ಚಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ತೀವ್ರಗೊಂಡು ಸರಕಾರ ತನ್ನಿಂದ ತಾನೇ ಸರಕಾರ ಅಭದ್ರಗೊಳ್ಳಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.
ಪ್ರತಿಪಕ್ಷಗಳು ಸರಕಾರವನ್ನು ಅಭದ್ರಗೊಳಿಸಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದು, ದುರಾಡಳಿತದ ಮೂಲಕ ಯಡಿಯೂರಪ್ಪ ಜನರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ಅವರ ಪಕ್ಷದಲ್ಲೇ ಆಂತರಿಕ ಭಿನ್ನಮತ ಸ್ಪೋಟಗೊಳ್ಳಲಿದೆ. ಯಪಿಎ ಸರಕಾರಕ್ಕೆ ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೂ ಅದಕ್ಕೂ ಸಂಬಂಧವಿಲ್ಲ. ಖರ್ಗೆ ಅವರಿಂದ ತೆರವಾಗಿರುವ ಸ್ಥಾನವನ್ನು ನನಗೆ ನೀಡಿದರೆ ಸರಕಾರಕ್ಕೆ ವಿರುದ್ಧ ಹೋರಾಟ ನಡೆಸಲು ರೂಪುರೇಷೆ ಸಿದ್ದಪಡಿಸುವುದಾಗಿ ಸಿದ್ದರಾಮಯ್ಯ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications