ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಬಂಡಾಯ ?
ಬೆಂಗಳೂರು, ಮೇ. 21 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತ್ರಿವಿಕ್ರಮ ಬಾರಿಸಿ ಪಕ್ಷ ಸಂಭ್ರಮ ಪಡುತ್ತಿದ್ದರೆ, ಖಾತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಿದ್ಯುತ್ ಸಚಿವ ಕೆ ಎಸ್ ಈಶ್ವರಪ್ಪ ನಡುವೆ ಭಿನ್ನಮತ ಸ್ಫೊಟಗೊಳ್ಳುವ ಸಾಧ್ಯತೆಗಳಿವೆ.
ಚುನಾವಣೆ ಫಲಿತಾಂಶದ ನಂತರ ಈಶ್ವರಪ್ಪ ಅವರ ಖಾತೆಯನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯೇ ಈಶ್ವರಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಮುಗಿಯಲಿ, ಪಕ್ಷದೊಳಗೇ ಆಪರೇಷನ್ ನಡೆಯುತ್ತದೆ. ಇದಕ್ಕ ಮೊದಲ ಬಲಿ ಈಶ್ವರಪ್ಪ ಆಗುತ್ತಾರೆ. ಅವರಿಗೆ ಕಾರ್ಮಿಕ ಖಾತೆಯನ್ನು ನೀಡಲಾಗುತ್ತದೆ ಎನ್ನುವ ಸುದ್ದಿಯಿಂದ ಈಶ್ವರಪ್ಪ ಗರಂ ಆಗಿದ್ದಾರೆ.
ಶಿವಮೊಗ್ಗದಲ್ಲಿ ಸಿಎಂ ಪುತ್ರ ರಾಘವೇಂದ್ರ ಗೆಲುವಿನ ಸಂಭ್ರಮವನ್ನು ಜಿಲ್ಲೆಯ ಸಚಿವರು, ಶಾಸಕರು, ಮುಖಂಡರು ಆಚರಿಸುತ್ತಿದ್ದರೆ, ಅತ್ತ ಪ್ರಭಾವಿ ನಾಯಕ ಈಶ್ವರಪ್ಪ ದೂರ ಉಳಿದಿದ್ದರು. ಮತಎಣಿಕೆ ದಿನ ಪಕ್ಷದ ಅಭ್ಯರ್ಥಿ ಗೆಲುವಿನ ಕಡೆಗೆ ಬರುತ್ತಿದ್ದಂತೆಯೇ ಜಿಲ್ಲೆಯ ನಾನಾ ಕಡೆ ಮೊಕ್ಕಾಂ ಹೂಡಿದ್ದ ಸಚಿವ ಹಾಲಪ್ಪ ಹಾಗೂ ಇತರ ಶಾಸಕರು ಮತಎಣಿಕೆ ಕೇಂದ್ರಕ್ಕೆ ಧಾವಿಸಿದ್ದರು.
ಬೆಂಗಳೂರಿನಲ್ಲದ್ದ ಮುಖ್ಯಮಂತ್ರಿ ಯಡಿಯೂರಪ್ಪ ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ ಗೆಲುವಿನ ಸಂಭ್ರಮದಲ್ಲಿ ಭಾಗವಹಿಸಿದ್ದರು. ಆದರೆ, ನಗರದಲ್ಲೇ ಇದ್ದ ಈಶ್ವರಪ್ಪ ಎಣಿಕೆ ಕೇಂದ್ರಕ್ಕೆ ಬರುವುದಿರಲಿ, ಪಕ್ಷದ ಕಚೇರಿಗೂ ಬಂದಿಲ್ಲ. ಗೆದ್ದಿರುವ ರಾಘವೇಂದ್ರ ಅವರನ್ನು ಅಭಿನಂದಿಸುವ ಉತ್ಸಾಹವನ್ನು ತೋರಿಲ್ಲ. ಇದು ಯಡಿಯೂರಪ್ಪ ಅವರ ಅಸಮಾದಾನಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಹಾದಿ ಅಷ್ಟೇನೂ ಸುಗಮವಲ್ಲ ಎನ್ನುವು ಸುಳಿವನ್ನು ಈಶ್ವರಪ್ಪ ಗಪ್ ಚುಪ್ ಮೂಲಕ ತೋರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications