ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಬಂಡಾಯ ?
ಬೆಂಗಳೂರು, ಮೇ. 21 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತ್ರಿವಿಕ್ರಮ ಬಾರಿಸಿ ಪಕ್ಷ ಸಂಭ್ರಮ ಪಡುತ್ತಿದ್ದರೆ, ಖಾತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಿದ್ಯುತ್ ಸಚಿವ ಕೆ ಎಸ್ ಈಶ್ವರಪ್ಪ ನಡುವೆ ಭಿನ್ನಮತ ಸ್ಫೊಟಗೊಳ್ಳುವ ಸಾಧ್ಯತೆಗಳಿವೆ.
ಚುನಾವಣೆ ಫಲಿತಾಂಶದ ನಂತರ ಈಶ್ವರಪ್ಪ ಅವರ ಖಾತೆಯನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯೇ ಈಶ್ವರಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಮುಗಿಯಲಿ, ಪಕ್ಷದೊಳಗೇ ಆಪರೇಷನ್ ನಡೆಯುತ್ತದೆ. ಇದಕ್ಕ ಮೊದಲ ಬಲಿ ಈಶ್ವರಪ್ಪ ಆಗುತ್ತಾರೆ. ಅವರಿಗೆ ಕಾರ್ಮಿಕ ಖಾತೆಯನ್ನು ನೀಡಲಾಗುತ್ತದೆ ಎನ್ನುವ ಸುದ್ದಿಯಿಂದ ಈಶ್ವರಪ್ಪ ಗರಂ ಆಗಿದ್ದಾರೆ.
ಶಿವಮೊಗ್ಗದಲ್ಲಿ ಸಿಎಂ ಪುತ್ರ ರಾಘವೇಂದ್ರ ಗೆಲುವಿನ ಸಂಭ್ರಮವನ್ನು ಜಿಲ್ಲೆಯ ಸಚಿವರು, ಶಾಸಕರು, ಮುಖಂಡರು ಆಚರಿಸುತ್ತಿದ್ದರೆ, ಅತ್ತ ಪ್ರಭಾವಿ ನಾಯಕ ಈಶ್ವರಪ್ಪ ದೂರ ಉಳಿದಿದ್ದರು. ಮತಎಣಿಕೆ ದಿನ ಪಕ್ಷದ ಅಭ್ಯರ್ಥಿ ಗೆಲುವಿನ ಕಡೆಗೆ ಬರುತ್ತಿದ್ದಂತೆಯೇ ಜಿಲ್ಲೆಯ ನಾನಾ ಕಡೆ ಮೊಕ್ಕಾಂ ಹೂಡಿದ್ದ ಸಚಿವ ಹಾಲಪ್ಪ ಹಾಗೂ ಇತರ ಶಾಸಕರು ಮತಎಣಿಕೆ ಕೇಂದ್ರಕ್ಕೆ ಧಾವಿಸಿದ್ದರು.
ಬೆಂಗಳೂರಿನಲ್ಲದ್ದ ಮುಖ್ಯಮಂತ್ರಿ ಯಡಿಯೂರಪ್ಪ ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ ಗೆಲುವಿನ ಸಂಭ್ರಮದಲ್ಲಿ ಭಾಗವಹಿಸಿದ್ದರು. ಆದರೆ, ನಗರದಲ್ಲೇ ಇದ್ದ ಈಶ್ವರಪ್ಪ ಎಣಿಕೆ ಕೇಂದ್ರಕ್ಕೆ ಬರುವುದಿರಲಿ, ಪಕ್ಷದ ಕಚೇರಿಗೂ ಬಂದಿಲ್ಲ. ಗೆದ್ದಿರುವ ರಾಘವೇಂದ್ರ ಅವರನ್ನು ಅಭಿನಂದಿಸುವ ಉತ್ಸಾಹವನ್ನು ತೋರಿಲ್ಲ. ಇದು ಯಡಿಯೂರಪ್ಪ ಅವರ ಅಸಮಾದಾನಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಹಾದಿ ಅಷ್ಟೇನೂ ಸುಗಮವಲ್ಲ ಎನ್ನುವು ಸುಳಿವನ್ನು ಈಶ್ವರಪ್ಪ ಗಪ್ ಚುಪ್ ಮೂಲಕ ತೋರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications