ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಸವನಗೌಡ ಪಾಟೀಲ್ ಯತ್ನಾಳ್ ಔಟ್
ಬೆಂಗಳೂರು, ಮೇ. 22 : ಕೇಂದ್ರ ಬಿಜೆಪಿ ವರಿಷ್ಠರ ಆದೇಶದ ಮೇರೆಗೆ ಪಕ್ಷ ವಿರೋಧಿ ಚಟುವಟಿಕೆಯ ಆರೋಪಕ್ಕಾಗಿ ಬಿಜಾಪುರದ ಮಾಜಿ ಸಂಸದ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಶುಕ್ರವಾರ ತಿಳಿಸಿದ್ದಾರೆ.
ಕಳೆದ ಬಾರಿ ಬಿಜಾಪುರದಿಂದ ಆಯ್ಕೆಯಾಗಿದ್ದ ಯತ್ನಾಳ್ ಪಕ್ಷದ ಆಪರೇಷನ್ ಕಮಲದ ಬಗ್ಗೆ ಅಪಸ್ವರ ಎತ್ತಿದ್ದರು. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷರನ್ನು ಬಹಿರಂಗವಾಗಿ ಟೀಕಿಸಿದ್ದರು. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಉರಿಮಜಲು ರಾಮ್ ಭಟ್ ಮತ್ತು ಶಕುಂತಲಾ ಶೆಟ್ಟಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಮತ್ತು ಅವರುಗಳು ಮೇಲೆ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಘಟಕ ಕೇಂದ್ರ ಮಂಡಳಿಗೆ ಲಿಖಿತ ದೂರು ನೀಡಿತ್ತು.
(ದಟ್ಸ್ ಕನ್ನಡ ವಾರ್ತೆ)
Comments
Story first published: Friday, May 22, 2009, 17:13 [IST]