ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ

By Staff
|
Google Oneindia Kannada News

Mallikarjun Kharge
ನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಗುಲ್ಬರ್ಗಾ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಅವರ ಅಭಿಮಾನಿ ವಲಯದಲ್ಲಿ ನಿರಾಶೆ ಉಂಟಾಗಿದೆ. ಕಳೆದ ಕೆಲ ದಿನಗಳಿಂದ ಖರ್ಗೆ ಕೂಡಾ ಕೇಂದ್ರದ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಮಂತ್ರಿಯಾಗುತ್ತಾರೆ ಎಂಬ ಸುದ್ದಿ ಹರಡಿತ್ತು. ಅದಕ್ಕೆ ಸ್ಪಷ್ಟ ಕಾರಣವೂ ಇತ್ತು, ಆದರೆ, ಹೈಕಮಾಂಡ್ ಖರ್ಗೆ ಅವರ ಅಸಂಖ್ಯಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದೆ.

ಮೊದಲ ಕಂತಿನ 19 ಮಂದಿ ಸಚಿವರಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರ ಹೆಸರು ಮಾತ್ರ ಇರುವುದು ಒಂದು ವರ್ಗದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತಂದಿದೆ. ಬೀದರ್ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಮುಂದಿನ ಸಂಪುಟ ವಿಸ್ತರಣೆಯಲ್ಲಿ ಖರ್ಗೆಗೆ ಸಚಿವ ಸ್ಥಾನ ಸಿಕ್ಕರೂ ಸಿಗಬಹುದು. ಆದರೆ, ಧರ್ಮಸಿಂಗ್ ಗೆ ಕಷ್ಟಸಾಧ್ಯ ಎನ್ನುವುದು ಕಾಂಗ್ರೆಸ್ ವಲಯದಿಂದ ಕೇಳಿಬರತೊಡಗಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X