ಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ

ರಾಜ್ಯ ಖಾತೆಗಳ ಸಚಿವರ ಪ್ರಮಾಣ ವಚವ ಸ್ವೀಕಾರ ಕಾರ್ಯಕ್ರಮ ಇಂದು ಇಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಡಿಎಂಕೆ ಮುಖಂಡ ಖಾತೆಗೆ ಸಂಬಂಧಿಸಿದಂತೆ ಮುನಿಸಿಕೊಂಡು ಚೆನ್ನೈಗೆ ಪ್ರಯಾಣ ಬೆಳೆಸಿದ್ದಲ್ಲದೇ ಯುಪಿಎ ಸರಕಾರಕ್ಕೆ ಬಾಹ್ಯಬೆಂಬಲ ನೀಡುವುದಾಗಿ ಹೇಳಿರುವುದು ಕಾಂಗ್ರೆಸ್ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಡಿಎಂಕೆ ಮನವೂಲಿಸಲು ಕಾಂಗ್ರೆಸ್ ವಲಯದ ಕಸರತ್ತು ಇನ್ನೂ ಮುಂದುವರಿದಿದೆ. ಇದರ ಜೊತೆಗೆ ನ್ಯಾಷನಲ್ ಕಾನ್ಫ್ ರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಕೂಡಾ ಐತಿಹಾಸಿಕ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರು ಹಾಜರಾಗುವುದಾಗಿ ಹೇಳಿದ್ದಾರೆ. ಇದು ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರಿಗೆ ಇರಿಸುಮುರಿಸು ತಂದಿದೆ.
ಪ್ರಧಾನಮಂತ್ರಿಯವರು ಕ್ಯಾಬಿನೆಟ್ ದರ್ಜೆಯ ಸ್ಥಾನ ನೀಡುವ ಭರವಸೆ ನೀಡಿದರೆ, ಫಾರೂಕ್ ಅಬ್ದುಲ್ಲಾ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾಗವಹಿಸುವ ಸಾಧ್ಯತೆಗಳಿವೆ ಎಂದು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಇಂದು ಸಂಜೆ 6.30ಕ್ಕೆ ರಾಷ್ಟ್ರಪತಿ ಭವನದ ಅಶೋಕ್ ಹಾಲ್ ನಲ್ಲಿ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 2 ಕ್ಕೆ ನೂತನ ಸರಕಾರದ ಮೊದಲ ಅಧಿವೇಶನ ನಡೆಯಲಿದೆ.
(ಏಜನ್ಸೀಸ್)











Click it and Unblock the Notifications