ರಾಜೀವ್ ಗಾಂಧಿ ಮಾನವ ಸೇವಾ ರಾಷ್ಟ್ರ ಪ್ರಶಸ್ತಿ
ಬೆಂಗಳೂರು, ಮೇ.22: ಭಾರತ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಮಕ್ಕಳ ಅಭಿವೃದ್ಧಿ , ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣಕ್ಕಾಗಿ 10 ವರ್ಷಕ್ಕಿಂತ ಹೆಚ್ಚಿನ ಉತ್ತಮ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿಗಳನ್ನು ಗುರುತಿಸಿ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು ಪ್ರತಿ ವರ್ಷ 3 ವ್ಯಕ್ತಿಗಳಿಗೆ ನೀಡಿ ಗೌರವಿಸಲಾಗುತ್ತದೆ.
ಪ್ರತಿ ವರ್ಷ ರಾಜೀವ್ ಗಾಂಧಿಯವರ ಜನ್ಮ ದಿನವಾದ ಆಗಸ್ಟ್ 20 ರಂದು ಈ ಪ್ರಶಸ್ತಿಯನ್ನು ಆಯ್ಕೆಯಾದ ವ್ಯಕ್ತಿಗಳ ಹೆಸರನ್ನು ಘೋಷಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರತಿ ಪ್ರಶಸ್ತಿಯು ರು.1 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ.
ಇದಲದೆ ಭಾರತ ಸರ್ಕಾರವು ಮಕ್ಕಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ, ಉತ್ತಮ ಸೇವೆಯನ್ನು ಸಲ್ಲಿಸಿರುವಂತಹ ಸಮಾಜ ಸೇವಕರ ಸೇವೆಯನ್ನು ಗುರುತಿಸಿ ವೈಯಕ್ತಿಕ ಪ್ರಶಸ್ತಿಗಳನ್ನು 3 ವ್ಯಕ್ತಿಗಳಿಗೆ ಹಾಗೂ 5 ಸ್ವಯಂಸೇವಾ ಸಂಸ್ಥೆಗಳಿಗೆ ಪ್ರಶಸ್ತಿ ನೀಡುತ್ತದೆ.
ವೈಯಕ್ತಿಕ ಪ್ರಶಸ್ತಿಯು ರು.1 ಲಕ್ಷ ನಗದು ಬಹುಮಾನ ಹಾಗೂ ಸಂಘ ಸಂಸ್ಥೆಗಳ ಪ್ರಶಸ್ತಿಯು ತಲಾ ರು.3 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ, ಪತ್ರವನ್ನು ಒಳಗೊಂಡಿರುತ್ತದೆ. ಆಯ್ಕೆಯಾದ ವ್ಯಕ್ತಿ ಹಾಗೂ ಸಂಘ ಸಂಸ್ಥೆಗಳ ಹೆಸರನ್ನು ಘೋಷಿಸಿ ಮಕ್ಕಳ ದಿನಾಚರಣೆಯೆಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕರ್ನಾಟಕ ಸರ್ಕಾರವೂ ಸಹ ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಂತಹ 2 ವ್ಯಕ್ತಿಗಳಿಗೆ ತಲಾ ರೂ 25,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ 2 ಸ್ವಯಂ ಸಂಸ್ಥೆಗಳಿಗೆ ತಲಾ ರು.1 ಲಕ್ಷ ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆ ದಿನದಂದು ಪ್ರದಾನ ಮಾಡಿ ಗೌರವಿಸುತ್ತದೆ.
ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಮೇಲೆ ತಿಳಿಸಿರುವ ಎಲ್ಲಾ ಪ್ರಶಸ್ತಿಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಘ ಸಂಸ್ಥೆಗಳನ್ನು ಆಯ್ಕೆಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ರಾಷ್ಟ್ರ ಪ್ರಶಸ್ತಿಗಾಗಿ ಸಮಿತಿಯು ಆಯ್ಕೆ ಮಾಡಿದಂತಹ ಸಂಸ್ಥೆಗಳ ಹಾಗೂ ವ್ಯಕ್ತಿಗಳ ಪೈಕಿ ಇಬ್ಬರು ವ್ಯಕ್ತಿಗಳಿಗೆ ಹಾಗೂ ಎರಡು ಸಂಸ್ಥೆಗಳೀಗೆ ನವೆಂಬರ್ 14 ರಂದು ಏರ್ಪಡಿಸಲಾಗುವ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
2009ನೇ ವರ್ಷದ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯಾ ಜಿಲ್ಲಾ ಕಚೇರಿಗಳಿಂದ ಪಡೆದು ಆಂಗ್ಲ ಭಾಷೆಯಲ್ಲಿ ತ್ರಿಪ್ರತಿಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಗೆ ದಿನಾಂಕ 30.5.2009 ರ ಒಳಗೆ ಪ್ರಧಾನ ಕಚೇರಿಗೆ ತಲುಪುವಂತೆ ಕಳುಹಿಸಲು ಕೋರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications