ಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿಗಳು ಹೇಳಿಲ್ಲ ಎಂದರು. ಶಾಸಕನಾಗಿ ಆಯ್ಕೆಯಾಗಿರುವುದೇ ಹಿಮಾಲಯದಷ್ಟು ಖುಷಿಯಾಗಿದೆ. ಆದರಲ್ಲಿ ಸಚಿವ ಸ್ಥಾನ ಕೊಟ್ಟು ಜನರ ಕೆಲಸ ಮಾಡಲು ಯಡಿಯೂರಪ್ಪ ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಿಂತ ಸೌಭಾಗ್ಯ ಬೇಕೇ ಎಂದು ಕೃಷ್ಣಯ್ಯ ಶೆಟ್ಟಿ ಹೇಳಿದರು.
ಕೋಲಾರ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿರುವೆ ಎನ್ನುವ ಆರೋಪ ಶುದ್ಧ ಸುಳ್ಳು. ಕೋಲಾರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಒಕ್ಕಲಿಗರಿಗೆ ವೀರಯ್ಯ ಅವರನ್ನು ಕಂಡರೆ ಆಗುವುದಿಲ್ಲ ಎಂಬ ಮಾತು ಕೇಳಿ ಬಂದಿದೆ. ಒಕ್ಕಲಿಗರ ಮತಗಳು ಬಿಜೆಪಿಗೆ ಬಾರದೇ ಇರಬಹುದು ಎಂಬ ಅನುಮಾನವಿದೆ. ಅಲ್ಲದೇ, ಜೆಡಿಎಸ್ ಅಭ್ಯರ್ಥಿ ಎರಡು ಲಕ್ಷ ಮತಗಳನ್ನು ಪಡೆದಿರುವುದು ಇಲ್ಲಿ ಗಮನಾರ್ಹ ಎಂದರು.
ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಂಡ ನಂತರ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರಾದ್ಯಂತ ಪ್ರವಾಸ ಮಾಡಿ ಮತಯಾಚಿಸಿದ್ದೇನೆ. ಆದರೂ ನನ್ನ ವಿರುದ್ಧವೇಕೆ ದೂರು ಬಂದಿದೆ ಎಂಬುದು ಗೊತ್ತಿಲ್ಲ ಎಂದು ಸಚಿವ ಶೆಟ್ಟಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications