ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು

Mallikarjun Kharge
ಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ ಸಚಿವ ಸಂಪುಟದಲ್ಲಾದರೂ ಸ್ಥಾನ ಸಿಗಲಿದೆ ಎಂಬ ಆಸೆಯಲ್ಲಿ ಈ ನಾಯಕರಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ನಾಯಕರ ನಡುವೆ ಪೈಪೋಟಿಯೇ ಖರ್ಗೆ ಅವರಿಗೆ ಮುಳುವಾಯಿತು ಎಂದು ಪಕ್ಷದ ಮೂಲಗಳು ಹೇಳುತ್ತವೆ. ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ 6ನೇ ಬಾರಿಗೆ ಆಯ್ಕೆಯಾಗುತ್ತಿರುವ ವಿ ಮುನಿಯಪ್ಪ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಕೊಡಲೇಬೇಕೆಂದು ಪಟ್ಟು ಹಿಡಿದ್ದರು. ಹಾಗಾಗಿ ಖರ್ಗೆ ಅವರಿಗೆ ಸಚಿವ ಸ್ಥಾನ ತಪ್ಪಿಹೋಯಿತು ಎನ್ನಲಾಗಿದೆ. ಮತ್ತೊಂದು ಮೂಲದ ಪ್ರಕಾರ ಮಂಗಳವಾರ ಕೇಂದ್ರಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಖರ್ಗೆ ಅವರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.

"ಎ'ಟೀಂನಲ್ಲಿ ಸಚಿವ ಸ್ಥಾನ ತಪ್ಪಿಸಿಕೊಂಡ ಖರ್ಗೆ ಅವರಿಗೆ 'ಬಿ'ಟೀಂ ನಲ್ಲಾದರೂ ಮಂತ್ರಿ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಖರ್ಗೆ ಅವರಿಗೆ ಸ್ವತಂತ್ರ ನಿರ್ವಹಣೆಯ ರಾಜ್ಯ ಮಂತ್ರಿ ಸ್ಥಾನವಾದರೂ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಖರ್ಗೆ ಬೆಂಬಲಿಗರು ಇದ್ದಾರೆ. ಒಟ್ಟಿನಲ್ಲಿ ಕೆ ಎಚ್ ಮುನಿಯಪ್ಪ್ಪ ಅಥವಾ ಖರ್ಗೆ ಇಬ್ಬರಲ್ಲಿ ಒಬ್ಬರಿಗೆ ಅಥವಾ ಇಬ್ಬರಿಗೂ ರಾಜ್ಯ ಖಾತೆಯ ಸ್ಥಾನ ಸಿಗುವ ಸಂಭವವಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+