ಜೂನ್ 1ರಿಂದ ಲೋಕಸಭೆ ಅಧಿವೇಶನ ಆರಂಭ
ನವದೆಹಲಿ, ಮೇ 23 : ಪ್ರಧಾನಿಯಾಗಿ ಸತತ ಎರಡನೇ ಬಾರಿಗೆ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಡಾ. ಮನಮೋಹನ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ಕಾರ್ಯಾರಂಭಿಸಿದ್ದಾರೆ.
ಶನಿವಾರ, ಮೇ 23ರಂದು ಬೆಳಿಗ್ಗೆ ಮನಮೋಹನ ಸಿಂಗ್ ಅವರು ನೂತನವಾಗಿ ಆಯ್ಕೆಯಾಗಿರುವ ಸಂಪುಟ ದರ್ಜೆಯ ಸಚಿವರ ಸಭೆ ಕರೆದಿದ್ದರು. ಈ ಭೇಟಿಯನ್ನು ಅನೌಪಚಾರಿಕ ಭೇಟಿ ಎನ್ನಲಾಗಿತ್ತಾದರೂ, ಪ್ರಧಾನಿ ಮನೆಯಲ್ಲಿ ನಡೆದ ಸಭೆಯಲ್ಲಿ ಜಂಟಿ ಅಧಿವೇಶನ ಕುರಿತಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ನಂತರ ಪಿ. ಚಿದಂಬರಂ ಅವರು ಸಭೆಯ ನಿರ್ಣಯಗಳನ್ನು ತಿಳಿಸಿದರು. ಜೂನ್ 1ರಿಂದ 9ರವರೆಗೆ ಜಂಟಿ ಅಧಿವೇಶನ ನಡೆಯಲಿದೆ. 1 ಮತ್ತು 2ರಂದು ನೂತನ ಸದಸ್ಯರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಿದ್ದಾರೆ. 3ರಂದು ಲೋಕಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮತ್ತು ಜೂನ್ 4ರಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನ ಜೂನ್ 9ರಂದು ಕೊನೆಗೊಳ್ಳಲಿದೆ.
ಇದಿಷ್ಟೇ ಅಲ್ಲದೆ, ಜೂನ್ 31ರೊಳಗಾಗಿ ಪೂರ್ಣ ಪ್ರಮಾಣದ ಬಜೆಟ್ಟನ್ನು ಮಂಡಿಸಲು ಸಂಪುಟ ಸಭೆ ನಿರ್ಧಸಿರಿದೆ.
ಸಭೆ ನಡೆಸುವ ಮೊದಲು ಸಿಂಗ್ ಅವರು ಮಹಾತ್ಮಾ ಗಾಂಧಿ ಸ್ಮಾರಕ ಸೇರಿದಂತೆ ಪ್ರಮುಖ ವ್ಯಕ್ತಿಗಳ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಮೇ 22ರಂದು ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನಿ ಮತ್ತು ಇತರ 19 ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ಸ್ವೀಕರಿಸಿದರು. ಬರುವ ಮಂಗಳವಾರ ಮಂತ್ರಿಮಂಡಳವನ್ನು ವಿಸ್ತರಿಸುವ ಸಾಧ್ಯತೆಯಿದೆ.
ಎರಡನೇ ಹಂತದ ವಿಸ್ತರಣೆಯಲ್ಲಿ ಕಾಂಗ್ರೆಸ್ ನ ಯುವ ಜನಪ್ರತಿನಿಧಿಗಳು ಸೇರಿದಂತೆ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಹಿರಿಯರಿಗೆ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಚಿವರಿಗೆ ಸನ್ಮಾನ : ಕರ್ನಾಟಕದಿಂದ ಕೇಂದ್ರ ಸಂಪುಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಹಾಗು ಗುಲಾಂ ನಭಿ ಆಝಾದ್ ಅವರನ್ನು ಇಲ್ಲಿನ ಕರ್ನಾಟಕ ಭವನದಲ್ಲಿ ಸನ್ಮಾನಿಸಲಾಯಿತು.
(ಏಜೆನ್ಸೀಸ್)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications