ಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್

ದಯಾನಿಧಿ ಮಾರನ್ ಅವರು ಮಾಹಿತಿ ತಂತ್ರಜ್ಞಾನ ಸಚಿವರಾಗುವ ಸಾಧ್ಯತೆಯಿದ್ದು, ರಾಜಾ ಹಾಗೂ ಅಳಗಿರಿ ಅವರಿಗೆ ಖಾತೆಯನ್ನು ನಿಗದಿಪಡಿಸಿಲ್ಲ. ಮೂರು ಕ್ಯಾಬಿನೆಟ್ ಸಚಿವರ ಜೊತೆಗೆ ನಾಲ್ಕು ರಾಜ್ಯ ಖಾತೆ ಸಚಿವ ಸ್ಥಾನ ನೀಡಲು ಮನಮೋಹನ್ ಸಿಂಗ್ ಒಪ್ಪಿಗೆ ನೀಡಿದ್ದಾರೆ. ಇಂದು ಚೆನ್ನೈನಲ್ಲಿ ಡಿಎಂಕೆ ಹಿರಿಯ ನಾಯಕರೊಂದಿಗೆ ಕರುಣಾನಿಧಿ ತಮ್ಮ ನಿವಾಸದಲ್ಲಿ ಈ ಸಂಬಂಧ ಮಹತ್ವದ ಮಾತುಕತೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಕಳೆದೆರಡು ದಿನಗಳಿಂದ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಐದು ಕ್ಯಾಬಿನೆಟ್ ಸಚಿವ ಸ್ಥಾನ ಮತ್ತು ನಾಲ್ಕು ರಾಜ್ಯ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿತ್ತು. ಡಿಎಂಕೆ ಒತ್ತಡಕ್ಕೆ ಮಣಿಯದ ಕಾಂಗ್ರೆಸ್ ನಾಯಕರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರು ಯುಪಿಎ ಸರಕಾರಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು.
ಮಂಗಳವಾರ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಡಿಎಂಕೆ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಯುಪಿಎಗೆ 318 ಸಂಸದರ ಬೆಂಬಲವಿದ್ದು, ಬಿಎಸ್ಪಿ, ಎಸ್ಪಿ ಬೆಂಬಲ ನೀಡಿವೆ. ರಾಜ್ಯದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೂಡಾ ಸ್ವಾತಂತ್ರ ಖಾತೆ ದೊರೆಯುವ ಸಂಭವವಿದೆ.
(ಏಜನ್ಸೀಸ್)












Click it and Unblock the Notifications