ಕರ್ನಾಟಕ ನಕ್ಸಲ್ ಮುಖ್ಯಸ್ಥ ರೆಡ್ಡಿ ಎನ್ ಕೌಂಟರ್

ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕೊಲೆ ಯತ್ನ ಸೇರಿದಂತೆ ಹಲವಾರು ನಾಯಕರ ಕೊಲೆ ಪ್ರಕರಣಗಳಲ್ಲಿ ಸುಧಾಕರ ರೆಡ್ಡಿ ಭಾಗಿಯಾಗಿದ್ದ. ಖಚಿತ ಸುಳಿವಿನ ಮೇರೆಗೆ ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ವಾರಂಗಲ್ ಜಿಲ್ಲೆಯ ಲವೆಲ್ಲಾ ಅರಣ್ಯ ಪ್ರದೇಶದಲ್ಲಿ ಶೋಧಕಾರ್ಯ ಆರಂಭಿಸಿದ ಪೊಲೀಸರಿಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು. ಪೊಲೀಸರ ಗುಂಡಿಗೆ ರೆಡ್ಡಿ ಹಾಗೂ ಆತನ ಸಹಚರ ವೆಂಕಟಯ್ಯ(29)ಮೃತಪಟ್ಟರು ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ ಸಿ ಸಜ್ಜನಾರ್ ತಿಳಿಸಿದ್ದಾರೆ.
2000ದಲ್ಲಿ ಆಂಧ್ರದ ಗೃಹ ಸಚಿವ ಎ ಮಾಧವರೆಡ್ಡಿ ಅವರನ್ನು ಹತ್ಯೆಗೈದಿದ್ದ ಸುಧಾಕರರೆಡ್ಡಿ ನಕ್ಸಲ್ ವಲಯದಲ್ಲಿ 'ಲ್ಯಾಪ್ ಟಾಪ್ ಮನುಷ್ಯ' ಎಂದೇ ಕರೆಸಿಕೊಳ್ಳುತ್ತಿದ್ದ. ತನ್ನ ಪ್ರತಿದಾಳಿಗೂ ಈತ ಲ್ಯಾಪ್ ಟಾಪ್ ನಲ್ಲೇ ಯೋಜನೆ ರೂಪಿಸುತ್ತಿದ್ದ. ಎಕೆ 47 ಗನ್ ಬಳಕೆ, ಗೆರಿಲ್ಲಾ ಯುದ್ಧ ತಂತ್ರ ಸೇರಿದಂತೆ ನೆಲಬಾಂಬ್ ಸ್ಫೋಟದ ತಂತ್ರದಲ್ಲಿ ರೆಡ್ಡಿ ನಿಷ್ಣಾತನಾಗಿದ್ದ. ರೆಡ್ಡಿ ತಲೆಗೆ ಆಂಧ್ರದಲ್ಲಿ 12 ಲಕ್ಷ ರು.ಗಳ ಬಹುಮಾನ ಘೋಷಿಸಲಾಗಿತ್ತು.
ಸುಧಾಕರ ರೆಡ್ಡಿ ಹುಟ್ಟಿದ್ದು ಅಂಧ್ರದ ಕುರ್ತಿರಾವ್ ಚೆರವಿನಲ್ಲಿ. ಉಸ್ಮಾಮಾನಿಯಾ ವಿಶ್ವವಿದ್ಯಾಲಯದ ಪದವೀಧರ. ವಿದ್ಯಾರ್ಥಿ ನಾಯಕನಾಗಿದ್ದ ರೆಡ್ಡಿ 80ರ ದಶಕದಲ್ಲೇ ನಕ್ಸಲ್ ಚಳುವಳಿಗೆ ಧುಮುಕಿದ್ದ. 2005ರಲ್ಲಿ ಸಾಕೇತ್ ರಾಜನ್ ಹತ್ಯೆಯಾದ ಬಳಿಕ ಕರ್ನಾಟಕ ನಕ್ಸಲ್ ಚಟುವಟಿಕೆಗಳನ್ನು ರೆಡ್ಡಿ ನಿಯಂತ್ರಿಸುತ್ತಿದ್ದ. ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಕಾರ್ಯಾಚರಣೆ ನಡೆಸುತ್ತಿದ್ದ.
(ಏಜೆನ್ಸೀಸ್)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications