ಕರ್ನಾಟಕ ನಕ್ಸಲ್ ಮುಖ್ಯಸ್ಥ ರೆಡ್ಡಿ ಎನ್ ಕೌಂಟರ್

ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕೊಲೆ ಯತ್ನ ಸೇರಿದಂತೆ ಹಲವಾರು ನಾಯಕರ ಕೊಲೆ ಪ್ರಕರಣಗಳಲ್ಲಿ ಸುಧಾಕರ ರೆಡ್ಡಿ ಭಾಗಿಯಾಗಿದ್ದ. ಖಚಿತ ಸುಳಿವಿನ ಮೇರೆಗೆ ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ವಾರಂಗಲ್ ಜಿಲ್ಲೆಯ ಲವೆಲ್ಲಾ ಅರಣ್ಯ ಪ್ರದೇಶದಲ್ಲಿ ಶೋಧಕಾರ್ಯ ಆರಂಭಿಸಿದ ಪೊಲೀಸರಿಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು. ಪೊಲೀಸರ ಗುಂಡಿಗೆ ರೆಡ್ಡಿ ಹಾಗೂ ಆತನ ಸಹಚರ ವೆಂಕಟಯ್ಯ(29)ಮೃತಪಟ್ಟರು ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ ಸಿ ಸಜ್ಜನಾರ್ ತಿಳಿಸಿದ್ದಾರೆ.
2000ದಲ್ಲಿ ಆಂಧ್ರದ ಗೃಹ ಸಚಿವ ಎ ಮಾಧವರೆಡ್ಡಿ ಅವರನ್ನು ಹತ್ಯೆಗೈದಿದ್ದ ಸುಧಾಕರರೆಡ್ಡಿ ನಕ್ಸಲ್ ವಲಯದಲ್ಲಿ 'ಲ್ಯಾಪ್ ಟಾಪ್ ಮನುಷ್ಯ' ಎಂದೇ ಕರೆಸಿಕೊಳ್ಳುತ್ತಿದ್ದ. ತನ್ನ ಪ್ರತಿದಾಳಿಗೂ ಈತ ಲ್ಯಾಪ್ ಟಾಪ್ ನಲ್ಲೇ ಯೋಜನೆ ರೂಪಿಸುತ್ತಿದ್ದ. ಎಕೆ 47 ಗನ್ ಬಳಕೆ, ಗೆರಿಲ್ಲಾ ಯುದ್ಧ ತಂತ್ರ ಸೇರಿದಂತೆ ನೆಲಬಾಂಬ್ ಸ್ಫೋಟದ ತಂತ್ರದಲ್ಲಿ ರೆಡ್ಡಿ ನಿಷ್ಣಾತನಾಗಿದ್ದ. ರೆಡ್ಡಿ ತಲೆಗೆ ಆಂಧ್ರದಲ್ಲಿ 12 ಲಕ್ಷ ರು.ಗಳ ಬಹುಮಾನ ಘೋಷಿಸಲಾಗಿತ್ತು.
ಸುಧಾಕರ ರೆಡ್ಡಿ ಹುಟ್ಟಿದ್ದು ಅಂಧ್ರದ ಕುರ್ತಿರಾವ್ ಚೆರವಿನಲ್ಲಿ. ಉಸ್ಮಾಮಾನಿಯಾ ವಿಶ್ವವಿದ್ಯಾಲಯದ ಪದವೀಧರ. ವಿದ್ಯಾರ್ಥಿ ನಾಯಕನಾಗಿದ್ದ ರೆಡ್ಡಿ 80ರ ದಶಕದಲ್ಲೇ ನಕ್ಸಲ್ ಚಳುವಳಿಗೆ ಧುಮುಕಿದ್ದ. 2005ರಲ್ಲಿ ಸಾಕೇತ್ ರಾಜನ್ ಹತ್ಯೆಯಾದ ಬಳಿಕ ಕರ್ನಾಟಕ ನಕ್ಸಲ್ ಚಟುವಟಿಕೆಗಳನ್ನು ರೆಡ್ಡಿ ನಿಯಂತ್ರಿಸುತ್ತಿದ್ದ. ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಕಾರ್ಯಾಚರಣೆ ನಡೆಸುತ್ತಿದ್ದ.
(ಏಜೆನ್ಸೀಸ್)
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications