'ಕೇಂದ್ರ ಸಂಪುಟಕ್ಕೆ ರಾಹುಲ್ ಸೇರ್ಪಡೆಯಾಗಲಿ'
ಬೆಂಗಳೂರು, ಮೇ.25: ಕೇಂದ್ರ ಸಚಿವ ಸಂಪುಟಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಸೇರಿಸಿಕೊಳ್ಳುವುದು ಒಳಿತು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಸೋಮವಾರ ಅಭಿಪ್ರಾಯಪಟ್ಟರು.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ದಿವಂಗತ ಜವಹಾರ್ ಲಾಲ್ ನೆಹರು ಸಚಿವ ಸಂಪುಟದಲ್ಲಿ ಇಂದಿರಾಗಾಂಧಿ ಅವರು ಇದ್ದರು. ಅನುಭವಿ ರಾಜಕಾರಣಿಗಳೊಂದಿಗೆ ಕೆಲಸ ಮಾಡುತ್ತಾ ಇಂದಿರಾಗಾಂಧಿ ಅವರು ಅನುಭವ ಗಳಿಸಿದರು. ಹಾಗೆಯೇ ಪ್ರಧಾನಿ ಮನಮೊಹನ್ ಸಿಂಗ್ ಅವರ ಸಚಿವ ಸಂಪುಟದಲ್ಲಿ ಬಹಳಷ್ಟು ಅನುಭವಿ ರಾಜಕಾರಣಿಗಳಿದ್ದಾರೆ.
ಯುವಕರನ್ನು ಪ್ರೇರೇಪಿಸುತ್ತಾ ಅನುಭವ ಹಾಗೂ ಜ್ಞಾನವನ್ನು ವೃದ್ಧಿಸಿಕೊಂಡು ದೇಶವನ್ನು ಮುನ್ನಡೆಸಲು ರಾಹುಲ್ ಗೆ ಸಾಧ್ಯವಾಗುತ್ತದೆ ಎಂದ ದೇಶಪಾಂಡೆ , ''ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ರಾಹುಲ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಯುವಕರಿಗೆ ಅವರು ಮಾದರಿಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರ ಹಾರೈಕೆಯಂತೆ ಅವರು ಸಚಿವ ಸಂಪುಟಕ್ಕೆ ಸೇರಿಕೊಳ್ಳಲಿ'' ಎಂದು ಹೇಳಿದರು.
ಕೇಂದ್ರ ಸರಕಾರ ರಾಜ್ಯ ಸರಕಾರದ ವಿಚಾರದಲ್ಲಿ ಮಲತಾಯಿ ಧೋರಣೆ ತಳೆಯುತ್ತಿದೆ ಎಂಬ ಯಡಿಯೂರಪ್ಪ ಅವರ ವಾದದಲ್ಲಿ ಹುರುಳಿಲ್ಲ. ಕೇಂದ್ರ ಸರಕಾರದೊಂದಿಗೆ ಅವರು ಸಹಕರಿಸಿ ರಾಜ್ಯ ಮುನ್ನಡೆಯವಂತೆ ನೋಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರಕಾರಗಳು ರಾಜ್ಯದ ಅಭಿವೃದ್ಧಿಗೆ ಒಟ್ಟಿಗೆ ಶ್ರಮಿಸಬೇಕು ಎಂದರು. ಯುಪಿಎ ಮತ್ತು ಎನ್ ಡಿಎ ಸರಕಾರದ ಅವಧಿಯಲ್ಲಿ ರಾಜ್ಯಕ್ಕೆ ಬಿಡುಗಡೆ ಮಾಡಿದ ಹಣ ಎಷ್ಟು ಎಂಬುದನ್ನು ಯಡಿಯೂರಪ್ಪನವರು ಹಣಕಾಸು ಕಾರ್ಯದರ್ಶಿಗಳಿಂದ ವಿವರಗಳನ್ನು ತರಿಸಿಕೊಂಡು ನೋಡಲಿ. ಯುಪಿಎ ಸರಕಾರ ರಾಜ್ಯಕ್ಕೆ ಎರಡು ಪಟ್ಟು ಹಣ ಬಿಡುಗಡೆ ಮಾಡಿತ್ತು ಎಂಬ ಸತ್ಯ ನಂತರ ಅವರಿಗೆ ಮನದಟ್ಟಾಗುತ್ತದೆ ಎಂದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications