ಹೆಚ್ಚುವರಿ ಮಹಾನಿರ್ದೇಶಕರಾಗಿ ಐಪಿಎಸ್ ಕೆಂಪಯ್ಯ
ಬೆಂಗಳೂರು, ಮೇ.26: ರಾಜ್ಯ ಸರ್ಕಾರ 13 ಐಪಿಎಸ್ ಅಧಿಕಾರಿಗಳು ವರ್ಗಾವಣೆಮಾಡಿದ್ದು ಎಲ್ಲರಿಗೂ ಉನ್ನತ ಅಧಿಕಾರ ಸಿಕ್ಕಿದೆ. ಕೆಎಸ್ ಆರ್ ಪಿಯಲ್ಲಿ ಐಜಿ ಆಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು ಅಂತರಿಕ ಸುರಕ್ಷತೆ ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕ(ADGP)ರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಅರಣ್ಯ ಇಲಾಖೆಯ ಐಜಿಪಿ ಓಂ ಪ್ರಕಾಶ್ ಅವರನ್ನು ಕ್ರೈಂ ಮತ್ತು ತಾಂತ್ರಿಕ ಸಲಹ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿ ನೇಮಿಸಲಾಗಿದೆ. ನಾಗರೀಕ ಹಕ್ಕು ವಿಭಾಗ ಡಿಐಜಿ ಜಯಪ್ರಕಾಶ್ ವಿ ನಾಯಕ್ ಅವರನ್ನು ಯೋಜನಾ ಮತ್ತು ಅಧುನೀಕರಣ ವಿಭಾಗದ ಐಜಿಪಿ ಹುದ್ದೆಗೆ ವರ್ಗಾಯಿಸಲಾಗಿದೆ.ಪಶ್ಚಿಮ ವಲಯ ಡಿಐಜಿ ಗೋಪಾಲ್ ಹೊಸೂರ್ ಅವರನ್ನು ಅದೇ ವಲಯದ ಐಜಿಪಿ ಆಗಿ ಬಡ್ತಿ ನೀಡಲಾಗಿದೆ.
ಅಗ್ನಿ ಸೇವಾ ವಿಭಾಗದ ಡಿಐಜಿಮಹಮದ್ ವಜೀರ್ ಆಹಮದ್ ಅವರಿಗೆ ಬಡ್ತಿ ನೀಡಿ ನಾಗರೀಕ ಹಕ್ಕು ಪ್ರತಿಪಾದಕ ವಿಭಾಗದ ಐಜಿಪಿ ಮಾಡಲಾಗಿದೆ. ನೇಮಕಾತಿ ಹಾಗೂ ತರಬೇತಿ ವಿಭಾಗದ ಡಿಐಜಿ ಸುನೀಲ್ ಅಗರವಾಲ್ ಅವರನ್ನು ಕೆಎಸ್ ಆರ್ ಟಿಸಿ ವಿಭಾಗದ ಐಜಿಪಿ ಹುದ್ದೆಗೇರಿಸಲಾಗಿದೆ. ಹೆಚ್ಚುವರಿ ವೃತ್ತಿಯಾಗಿ ಬಿಹಾರದಲ್ಲಿ ಕಾರ್ಯನಿರತರಾಗಿರುವ ಉಮೇಶ್ ಕುಮಾರ್ ಅವರನ್ನು ಡಿಐಜಿ ಶ್ರೇಣಿಗೆ ಏರಿಸಲಾಗಿದೆ.
ಬಿಜಾಪುರದ ಎಸ್ ಪಿ ಅರುಣ್ ಚಕ್ರವರ್ತಿ ಅವರನ್ನು ಬಿಎಂಟಿಸಿ ಭದ್ರತಾ ವಿಭಾಗದ ಡಿಐಜಿ ಮಾಡಲಾಗಿದೆ. ಬೆಂಗಳೂರು ಉತ್ತರದ ಡಿಸಿಪಿ ಸೈಯದ್ ಹುಸೇನ್ ಅವರನ್ನು ನೇಮಕಾತಿ ಮತ್ತು ತರಬೇತಿ ವಿಭಾಗದ ಡಿಐಜಿ ಮಾಡಲಾಗಿದೆ. ಕೊಡಗು ಎಸ್ ಪಿ ರಮೇಶ್ ಎಸ್ ಅವರಿಗೆ ಬಡ್ತಿ ನೀಡಿ ರೈಲ್ವೇ ವಿಭಾಗದ ಡಿಐಜಿಯಾಗಿ ನೇಮಕ ಮಾಡಲಾಗಿದೆ.
(ಏಜೆನ್ಸೀಸ್)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications