ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರು, ಎಲ್ ಟಿಟಿಇ ಉಗ್ರರು ಸಮುದ್ರದ ಮೂಲಕ ಭಾರತದೊಳಗೆ ಪ್ರವೇಶಿಸುತ್ತಿದ್ದಾರೆಂದು ಸುಳಿವು ದೊರೆತಿದೆ. ಇದನ್ನು ತಡೆಗಟ್ಟಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಮುಖ್ಯವಾಗಿ ತಮಿಳುನಾಡಿಗೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಈ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು. ಸೂಕ್ತ ಭದ್ರತೆ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಶ್ರೀಲಂಕಾ ಸರಕಾರ ಘೋಷಿಸಿರುವಂತೆ ಪ್ರಭಾಕರನ್ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ ಅವರು, ಲಂಕಾ ತಮಿಳರಿಗೆ ಭಾರತದಲ್ಲಿ ನೆಲೆಸಲು ಅವಕಾಶ ಮಾಡಿಕೊಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲಂಕಾದಲ್ಲಿ ಶಾಂತಿ ನೆಲೆಸಿದೆ. ಅಲ್ಲಿ ಅವರ ನೆಮ್ಮದಿ ಜೀವನ ನಡೆಸಬಹುದು ಎಂದು ಚಿದಂಬರಂ ಹೇಳಿದರು.
(ಏಜನ್ಸೀಸ್)
Comments
ಭಾರತ india ಶ್ರೀಲಂಕಾ ಎಲ್ ಟಿಟಿಇ ltte p chidambaram ಪಿ ಚಿದಂಬರಂ sri lanka ತಮಿಳುನಾಡು tamil nadu srilankan tamils
Story first published: Tuesday, May 26, 2009, 12:08 [IST]